ಸಿದ್ದಗಂಗಾ ಶ್ರೀಗಳು 
ರಾಜ್ಯ

ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ವಾಪಸ್, ಚಿಕಿತ್ಸೆ ಮುಂದುವರಿಕೆ

ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ...

ತುಮಕೂರು: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಬುಧವಾರ ಬೆಳಗ್ಗೆ ಮಠಕ್ಕೆ ವಾಪಸ್ ಕರೆತರಲಾಗಿದೆ.

ಶ್ವಾಸಕೋಶದ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಗಂಗಾ ಶ್ರೀಗಳು ಮಠಕ್ಕೆ ಹೋಗಬೇಕೆಂದು ನಿನ್ನೆಯಿಂದ ಹಠ ಹಿಡಿದಿದ್ದರಿಂದ ಇಂದು ಮುಂಜಾನೆ ವೇಳೆಗೆ  ಕರೆದುಕೊಂಡು ಬರಲಾಗಿದೆ. ಆಸ್ಪತ್ರೆಯಲ್ಲಿ ನೀಡಲಾಗುತ್ತಿದ್ದ ಚಿಕಿತ್ಸೆಯನ್ನು ಮಠದಲ್ಲಿ ಮುಂದುವರಿಸಲಾಗುವುದು ಎಂದು ಕಿರಿಯ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.

ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ಇಂದು ಅಥವಾ ನಾಳೆ ಶಿಫ್ಟ್ ಮಾಡಬೇಕಂತ ಮಠದ ಹಿರಿಯರು ಹಾಗೂ ಎಸ್‍ಪಿ ಸೇರಿ ಸಭೆ ನಡೆಸಿ ನಿರ್ಧಾರ ಮಾಡಿದ್ದೇವು. ಆದರೆ ರಾತ್ರಿಯಿಂದ ಸ್ವಾಮೀಜಿಗಳು ಮಠಕ್ಕೆ ಹೋಗಬೇಕೆಂದು ಚಡಪಡಿಸುತ್ತಿದ್ದರು. ಆದ್ದರಿಂದ ಬೆಳಗಿನ ಜಾವ ಈ ರೀತಿ ನಿರ್ಧಾರ ತೆಗೆದುಕೊಂಡು ಶಿಫ್ಟ್ ಮಾಡಲಾಗಿದೆ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ.

ಶ್ರೀಗಳಿಗೆ ನಿಶ್ಯಕ್ತಿ ಮತ್ತು ಉಸಿರಾಟದ ತೊಂದರೆ ಹೊರತುಪಡಿಸಿದರೆ ಬೇರೆ ಎಲ್ಲಾ ಪ್ಯಾರಾಮೀಟರ್ಸ್ ಸರಿಯಾಗಿದೆ. ಶ್ವಾಸಕೋಶದ ಸೋಂಕು ಕಡಿಮೆಯಾಗಿದೆ. ಶಸ್ತ್ರಚಿಕಿತ್ಸೆ ಮಾಡಿದ ಗಾಯ ವಾಸಿಯಾಗಿದೆ. ಭಕ್ತಾದಿಗಳು ಆತಂಕಪಡುವ ಅವಶ್ಯ ಇಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ತಿಳಿಸಿದ್ದಾರೆ.

ಇಂದು ಮುಂಜಾನೆ ಮೈಸೂರಿನ ಯದುವೀರ್ ಒಡೆಯರ್ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿ ಶ್ರೀಗಳು ವಿಶ್ರಾಂತಿಯಲ್ಲಿ ಇದ್ದರು. ಹಾಗಾಗಿ ಮಾತನಾಡಲು ಸಾಧ್ಯವಾಗಿಲ್ಲ. ಆಶೀರ್ವಾದ ಪಡೆದುಕೊಂಡು ಬಂದೆ ಎಂದರು.

ಸ್ವಾಮೀಜಿಗಳನ್ನು ಮಠಕ್ಕೆ ಕರೆತಂದ ಹಿನ್ನಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶ್ರೀಗಳ ಭಕ್ತಾದಿಗಳು ಮಠದ ಬಳಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT