ಹುಬ್ಬಳ್ಳಿ: ಚೇಳು ಕಚ್ಚಿದ ಬಾಲಕನಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದ ಪರಿಣಾಮ 14 ವರ್ಷದ ಬಾಲಕ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ,
ಕುಷ್ಠಗಿ ತಾಲೂಕಿನ ನವಲಹಳ್ಳಿ ಗ್ರಾಮದ ಮಲ್ಲಪ್ಪ ಛಲವಾದಿ ಮೃತ ಬಾಲಕ, ಜನವರಿ 12 ರಂದು ಬಾಲಕನ ಮನೆಯಲ್ಲಿ ಆತನಿಗೆ ಚೇಳು ಕಚ್ಚಿತ್ತು, ಆದರೆ ಆತನಿಗೆ ಚೇಳು ಕಚ್ಚಿದೆ ಎಂಬ ಬಗ್ಗೆ ಅರವಿರಲಿಲ್ಲ, ನೋವು ಹೆಚ್ಚಾದಾಗ ಆತ ಪೋಷಕರಿಗೆ ತಿಳಿಸಿದ್ದ,.
ಪೋಷಕರು ಆತನನ್ನು ತಾವರಗೇರಿ ಆಸ್ಪತ್ರೆಗೆ ಕರೆದೊಯ್ದಿದ್ದರು, ಪರೀಕ್ಷೆ ಮಾಡಿದ ಅಲ್ಲಿನ ವೈದ್ಯರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದರು
ಆರು ಮಂದಿ ಸಹೋದರರಲ್ಲಿ ಬಾಲಕ ಕೊನೆಯ ಮಗನಾಗಿದ್ದ, ಅವರೆಲ್ಲರು ಬೆಂಗಳೂರಿನಲ್ಲಿದ್ದರು, ಮಲ್ಲಪ್ಪ ತನ್ನ ತಾಯಿಯ ಜೊತೆ ನವಲಳ್ಳಿ ಗ್ರಾಮದಲ್ಲಿದ್ದ, ಆದರೆ ಚಿಕಿತ್ಸೆಗೆ ಸ್ಪಂದಿಸದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ, ಬಾಲಕನಿಗೆ ವಿಷ ನಿರೋಧಿಸುವ ಇಂಜೆಕ್ಷನ್ ನೀಡಿದ್ದರೇ ಬಾಲಕ ಬದುಕುತ್ತಿದ್ದ ಎಂದು ವೈದ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos