ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಸ್ತೃತ ಯೋಜನಾ ವರದಿ ಸಿದ್ಧ

ಹಲವು ಸುತ್ತಿನ ಸಮಾಲೋಚನೆ ಮೂಲಕ ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ನೆಲ್ಲಿಯಡಿ ಜಂಕ್ಷನ್ ವರೆಗೂ ಚಿತ್ರದುರ್ಗ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ಅಂತರ ಕಾರಿಡಾರ್ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಗೊಳಿಸಲಾಗಿದೆ.

ಬೆಂಗಳೂರು: ಹಲವು ಸುತ್ತಿನ ಸಮಾಲೋಚನೆ ಮೂಲಕ ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ನೆಲ್ಲಿಯಡಿ ಜಂಕ್ಷನ್ ವರೆಗೂ  ಚಿತ್ರದುರ್ಗ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ಅಂತರ ಕಾರಿಡಾರ್  ವಿಸ್ತೃತ ಯೋಜನಾ ವರದಿಯನ್ನು ಸಿದ್ಧಗೊಳಿಸಲಾಗಿದೆ.

ಸುಮಾರು 2, 500 ಕೋಟಿ ರೂ. ಮೊತ್ತದ ಈ ಯೋಜನೆಯಿಂದ ದೇಶದ ಪ್ರಮುಖ ನಗರಗಳನ್ನು ಸಂಪರ್ಕಕಕ್ಕೆ ಅನುಕೂಲವಾಗಲಿದ್ದು, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಮುಂದಿನ ತಿಂಗಳು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

230 ಕಿ. ಮೀ. ದೂರದ ಚಿತ್ರದುರ್ಗ ಕಾರಿಡಾರ್  ಒಟ್ಟಾರೆ 60.13 ಹೆಕ್ಟರ್ ಅರಣ್ಯ ಪ್ರದೇಶದಲ್ಲಿ ಸಾಗಲಿದ್ದು, ಅರಣ್ಯ ತೆರವಿಗಾಗಿ ಭಾರತೀಯ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎದುರು ನೋಡುತ್ತಿದೆ. ಪ್ರಸ್ತಾವಿತ ರಸ್ತೆ  22 ಕಿಲೋ ಮೀಟರ್ ಘಾಟ್ ಸೆಕ್ಷನ್ ನಲ್ಲಿ ಸಾಗಲಿದ್ದು, ಕಂದಾಯ ಭೂಮಿ ಹಾಗೂ ಅರಣ್ಯ  ಪ್ರದೇಶ ಸ್ವಾಧೀನ ಕಾರ್ಯ ಕೈಗೊಳ್ಳಬೇಕಾಗುತ್ತದೆ ಎಂದು  ಚಿತ್ರದುರ್ಗ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಹೇಳಿದ್ದಾರೆ.

ಕೊಪ್ಪಳ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಸಂರಕ್ಷಿತ ಪ್ರದೇಶ, ಅಭಯಾರಣ್ಯಗಳು, ಮೀಸಲು ಅರಣ್ಯಗಳು ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯದಲ್ಲಿ ಪ್ರಸ್ತಾವಿತ ರಸ್ತೆ ಸಾಗಲಿದೆ.  ಕುದುರೆಮುಖ, ಭದ್ರಾ, ಮತ್ತು ಜೋಗಿಮಠ ಮೂರು ಸಂರಕ್ಷಿತ ಪ್ರದೇಶಗಳು ಪ್ರಸ್ತಾವಿತ ಕಾರಿಡಾರ್ ಯೋಜನಾ ವ್ಯಾಪ್ತಿಯಲ್ಲಿದ್ದು,  ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿಯಿಂದ ಎನ್ ಓಸಿ ಪಡೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಬರುವ ಪ್ರಮುಖ ಆನೆ ಕಾರಿಡಾರ್ ಬಗ್ಗೆ  ಸ್ಥಳೀಯ ನಿವಾಸಿಗಳು ಹಾಗೂ ಅರಣ್ಯ ಇಲಾಖೆ ಜೊತೆ ಚರ್ಚೆ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT