ಬೆಂಗಳೂರು: ನಾಯಂಡಹಳ್ಳಿ ಬಳಿ ಇಂದು ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 40 ಕ್ಕೂ ಹೆಚ್ಚು ಗುಡಿಸಲುಗಳ ಭಸ್ಮವಾಗಿರುವ ಬಗ್ಗೆ ವರದಿಯಾಗಿದೆ.
ರಾತ್ರಿ 8 ಗಂಟೆ ಸುಮಾರಿನಲ್ಲಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಗುಡಿಸಲುಗಳಿಗೂ ವ್ಯಾಪಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 40 ಕ್ಕೂ ಹೆಚ್ಚು ಗುಡಿಸಲುಗಳು ಆಹುತಿಯಾಗಿವೆ.
ಈ ಗುಡಿಸಲುಗಳಲ್ಲಿ ಬಿಹಾರ ಮೂಲದ ಕೂಲಿ ಕಾರ್ಮಿಕರು ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸುದ್ದಿ ತಿಳಿದು 8 ಕ್ಕೂ ಹೆಚ್ಚು ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ .
ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.