ರಾಜ್ಯ

ಬೆಂಗಳೂರು: ಬೆಂಕಿಯ ಕೆನ್ನಾಲಿಗೆಗೆ 40 ಗುಡಿಸಲುಗಳು ಭಸ್ಮ

Nagaraja AB

ಬೆಂಗಳೂರು: ನಾಯಂಡಹಳ್ಳಿ ಬಳಿ ಇಂದು  ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 40 ಕ್ಕೂ ಹೆಚ್ಚು ಗುಡಿಸಲುಗಳ ಭಸ್ಮವಾಗಿರುವ ಬಗ್ಗೆ ವರದಿಯಾಗಿದೆ.

ರಾತ್ರಿ 8 ಗಂಟೆ ಸುಮಾರಿನಲ್ಲಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಗುಡಿಸಲುಗಳಿಗೂ ವ್ಯಾಪಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 40 ಕ್ಕೂ ಹೆಚ್ಚು ಗುಡಿಸಲುಗಳು ಆಹುತಿಯಾಗಿವೆ.

ಈ ಗುಡಿಸಲುಗಳಲ್ಲಿ ಬಿಹಾರ ಮೂಲದ ಕೂಲಿ ಕಾರ್ಮಿಕರು ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಸುದ್ದಿ ತಿಳಿದು 8 ಕ್ಕೂ ಹೆಚ್ಚು ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ .

ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

SCROLL FOR NEXT