ರಾಜ್ಯ

ಕೈ ಶಾಸಕರ ಮಾರಾಮಾರಿ: ಆನಂದ್ ಸಿಂಗ್ ತಲೆಗೆ 12 ಹೊಲಿಗೆ!?

Srinivas Rao BV
ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕ ಕಂಪ್ಲಿ ಗಣೇಶ್-ಆನಂದ್ ಸಿಂಗ್ ನಡುವೆ ನಡೆದ ಮಾರಾಮಾರಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಾಸಕ ಆನಂದ್ ಸಿಂಗ್ ಅವರ ತಲೆಗೆ 12 ಹೊಲಿಗೆ ಹಾಕಲಾಗಿದೆ. 
ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಗೆ ತಲೆಗೆ ತೀವ್ರವಾದ ಪೆಟ್ಟಾಗಿದ್ದು, 12 ಹೊಲಿಗೆ ಹಾಕಲಾಗಿದೆ ಎಂದು   ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.  ಪ್ರಾರಂಭದಲ್ಲಿ ಹಲ್ಲೆಯ ವಿಷಯವನ್ನು ಮುಚ್ಚಿಡಲು ಕಾಂಗ್ರೆಸ್ ನಾಯಕರು ಪ್ರಯತ್ನಿಸಿದ್ದರು. ಆದರೆ ಸುದ್ದಿ ಬಹಿರಂಗವಾಗಿದ್ದು 12 ಹೊಲಿಗೆ ಹಾಕಲಾಗಿದೆ ಎಂಬುದು ತಿಳಿದುಬಂದಿದೆ. 
ತಲೆಗೆ ಪೆಟ್ಟು ಬಿದ್ದಿರುವ ಆನಂದ್  ತಲೆಗೆ ಸಿಟಿ ಸ್ಕ್ಯಾನ್ ತಪಾಸಣೆ ಮಾಡಲಾಗಿದ್ದು, ವರದಿಗಳು ಬಂದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. 
SCROLL FOR NEXT