ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಲ್ಲಿ ನಾಲ್ಕು ವರ್ಷಗಳ ಕಾಲ ಜೈಲುಶಿಕ್ಷೆಗೊಳಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾಗೆ ವಿಐಪಿ ಸೌಕರ್ಯ ಒದಗಿಸುತ್ತಿರುವುದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಯಲ್ಲಿ ತಿಳಿದುಬಂದಿದೆ.
ಶಶಿಕಲಾಗೆ ಒಂದು ಕೊಠಡಿ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ. ಜೈಲಿನಲ್ಲಿ ಅಡುಗೆ ಮಾಡಿಕೊಳ್ಳಲು ವಿನಾಯಿತಿ ಇಲ್ಲ. ಆದರೆ, ಶಶಿಕಲಾ ಅಡುಗೆ ಮಾಡಿಕೊಳ್ಳಲು ಜೈಲಿನ ಅಧಿಕಾರಿಗಳು ಅವಕಾಶ ನೀಡಿದ್ದಾರೆ.
ಗುಂಪಾಗಿ ಬರುವ ಜನರು ಆಕೆಯ ಕೊಠಡಿಗೆ ನೇರವಾಗಿ ತೆರಳಿ 3 ರಿಂದ ನಾಲ್ಕು ಗಂಟೆಗಳ ಕಾಲ ಮಾತುಕತಕೆ ನಡೆಸಲು ಅವಕಾಶ ನೀಡುವ ಮೂಲಕ ಕಾನೂನು ಉಲ್ಲಂಘಿಸಲಾಗಿದೆ ಎಂದು ಆರ್ ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ತಿಳಿಸಿದ್ದಾರೆ.