ಜೆಎನ್ ಗಣೇಶ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ 
ರಾಜ್ಯ

ಶಾಸಕ ಗಣೇಶ್ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು; ಮುಖಕ್ಕೆ ಹೊಡೆದು, ತಲೆಯನ್ನು ಗೋಡೆಗೆ ಗುದ್ದಿದರು: ಆನಂದ್‌ ಸಿಂಗ್

ಈಗಲ್ಟನ್ ರೆಸಾರ್ಟ್​ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಕಂಪ್ಲಿ ಶಾಸಕ....

ಬೆಂಗಳೂರು: ಈಗಲ್ಟನ್ ರೆಸಾರ್ಟ್​ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಕಂಪ್ಲಿ ಶಾಸಕ ಜೆಎನ್ ಗಣೇಶ್ ಅವರ ವಿರುದ್ಧ ಸೋಮವಾರ ಎಫ್ಐಆರ್ ದಾಖಲಿಸಿದ್ದಾರೆ.
ಆನಂದ್ ಸಿಂಗ್ ನೀಡಿದ ದೂರಿನ ಆಧಾರದ ಮೇಲೆ ಕಂಪ್ಲಿ ಶಾಸಕ ಗಣೇಶ್ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323(ಹಲ್ಲೆ), 324(ದೊಣ್ಣೆಯಿಂದ ಹಲ್ಲೆ), 307(ಕೊಲೆ ಯತ್ನ), 504(ಉದ್ದೇಶ ಪೂರ್ವಕ ಶಾಂತಿ ಕದಡುವುದು) 506(ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ.
ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಸೂಚನೆಯಂತೆ ಲೋಕಸಭೆ ಚುನಾವಣೆ ಹಾಗೂ ಬರ ನಿರ್ವಹಣೆ ಬಗ್ಗೆ ಚರ್ಚೆ ನಡೆಸಲು ಸಭೆ ಕೆರೆಯಲಾಗಿತ್ತು. ಈ ಸಭೆಯಲ್ಲಿ ನಾನು ಭಾಗಿಯಾಗಿದ್ದೆ. ಶನಿವಾರದಂದು ಸಭೆಯ ಬಳಿಕ ಇತರೇ ಶಾಸಕರೊಂದಿಗೆ ಊಟ ಮುಗಿಸಿಕೊಂಡು ಕಂಪ್ಲಿ ಶಾಸಕರಾದ ಗಣೇಶ್ ಅವರೊಂದಿಗೆ ರೂಂ ಕಡೆ ಹೋಗುತ್ತಿದ್ದೇವು. ಈ ವೇಳೆ ಗಣೇಶ್ ಮಾತನಾಡುತ್ತಾ, 'ಈ ಬಾರಿ ಚುನಾವಣೆಗೆ ನೀನು ನನಗೆ ಹಣ ಸಹಾಯ ಸರಿಯಾಗಿ ಮಾಡಲಿಲ್ಲ. ನಿನ್ನ ತಂಗಿ ಮಗ ಸಂದೀಪ್‍ನನ್ನು ಮುಗಿಸುತ್ತೇನೆ' ಅಂದರು. ಅದಕ್ಕೆ ನಾನು, 'ಯಾಕಪ್ಪ ನನ್ನ ಕುಟುಂಬದವರ ವಿಷಯಕ್ಕೆ ಬರುತ್ತೀಯಾ' ಎಂದು ಪ್ರಶ್ನಿಸಿದೆ. ಅದಕ್ಕೆ ಕೋಪಗೊಂಡ ಗಣೇಶ್, 'ಮೊದಲು ನಿನ್ನನ್ನು ಸಾಯಿಸುತ್ತೇನೆ. ಆಗ ಎಲ್ಲವು ಸರಿಯಾಗುತ್ತೆ' ಅಂತ ಜೋರು ಜೋರಾಗಿ ಅವಾಚ್ಯ ಪದಗಳನ್ನು ಬಳಸಿ ನನ್ನನ್ನು ನಿಂದಿಸಿದರು. 
ಬಳಿಕ ಪಕ್ಷದ ಮುಖಂಡರನ್ನು ಎತ್ತಿ ಕಟ್ಟಿಕೊಂಡು ಅವರ ಕೈಗೆ ಸಿಕ್ಕ ಪಾಟ್ ಹಾಗೂ ದೊಣ್ಣೆಯಿಂದ ನನಗೆ ತಲೆಗೆ ಹಾಗೂ ಮುಖಕ್ಕೆ ಹೊಡೆದಿದ್ದಾರೆ. ಅಲ್ಲದೇ ನನ್ನ ತಲೆಯನ್ನು ಗೋಡೆಗೆ ಗುದ್ದಿ, ಪಿಸ್ತೂಲ್ ಕೊಡಿ. ಇವನನ್ನು ಇಲ್ಲೇ ಮುಗಿಸುತ್ತೇನೆ. ಇವನು ರಾಜಕೀಯವಾಗಿ ನನ್ನನ್ನು ಮುಗಿಸಲು ಹೊರಟಿದ್ದಾನೆ. ಇವನ ಪ್ರಾಣ ತೆಗೆದು ಇಲ್ಲೇ ಮುಗಿಸಿಬಿಡುತ್ತೇನೆ ಎಂದು ಗದರಿದ್ದಾರೆ. ಬಳಿಕ ನಾನು ಕೆಳಗೆ ಬಿದ್ದಾಗ ನನ್ನನ್ನು, 'ಸಾಯಿ ಸಾಯಿ' ಎಂದು ಹೇಳಿ ತುಳಿದು, ಕೈ ಮುಷ್ಠಿಕಟ್ಟಿ ಎದೆಗೆ ಹೊಡೆದಿದ್ದಾರೆ. ಇದರಿಂದ ಕಣ್ಣುಗಳು, ಮುಖ ಹಾಗೂ ದೇಹದ ಇತರೇ ಭಾಗಗಳಿಗೆ ಪೆಟ್ಟಾಗಿದೆ ಎಂದು ಆನಂದ್ ಸಿಂಗ್ ದೂರಿನಲ್ಲಿ ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT