ರಾಜ್ಯ

ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ- ಮೂವರು ಸ್ಥಳದಲ್ಲೇ ಸಾವು

Shilpa D
ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹನುಮನಮಟ್ಟಿ ಗ್ರಾಮದ ಬಳಿ ನಡೆದಿದೆ.
ದಾವಣಗೆರೆ ಮೂಲದ ಸುಮಂತ್(23), ದರ್ಶನ್(24) ಹಾಗೂ ಸುನೀಲ್(23) ಮೃತ ದುರ್ದೈವಿಗಳು. ಗೋವಾಗೆ ಟ್ರಿಪ್ ಗೆ ತೆರಳಿ ವಾಪಸ್ ಬರುತ್ತಿದ್ದ ವೇಳೆ  ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ  ಗಾಯಗೊಂಡಿರುವ ಸಚಿನ್ ಮತ್ತು ರಜತ್ ಗಾಯಗೊಂಡಿದ್ದು ಇಬ್ಬರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಣೆ-ಬೆಂಗಳೂರು- ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ, ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SCROLL FOR NEXT