ಬೆಂಗಳೂರು: ನಗರದ ವಿದ್ಯಾರ್ಥಿನಿಯೊಬ್ಬಳಿಗೆ ಈ ಬಾರಿ ಪ್ರಧಾನಿ ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸುವ ಅವಕಾಶ ಸಿಕ್ಕಿದೆ. ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್ ಸಮಾರಂಭದಲ್ಲಿ ಭಾಗಿಯಾಗಲು ಬೆಂಗಳೂರಿನ ವಿದ್ಯಾರ್ಥಿನಿಗೆ ದೆಹಲಿಯ ಮಾನವ ಸಂಪನ್ಮೂಲ ಇಲಾಖೆಯಿಂದ ಆಹ್ವಾನ ಬಂದಿದೆ.
ನಗರದ ಗೋಕುಲ್ ಎಕ್ಸ್ ಟೆನ್ಶನ್ ನಲ್ಲಿರುವ ನವ್ಕೀಸ್ ಶಾಲೆಯಲ್ಲಿ 11ನೇ ತರಗತಿಯಲ್ಲಿ ಓದುತ್ತಿರುವ ದೇವಿಕಾ ಸಂತೋಷ್ ಪ್ರಧಾನ ಮಂತ್ರಿ ಜೊತೆ ಕುಳಿತು ಗಣರಾಜ್ಯೋತ್ಸವ ಪರೇಡ್ ವೀಕ್ಷಣೆ ಮಾಡಲಿದ್ದಾಳೆ. ಕಳೆದ ವರ್ಷ ಸಿಬಿಎಸ್ಸಿಯ 10ನೇ ತರಗತಿಯಲ್ಲಿ ದೇಶದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಲ್ಲಿ ದೇವಿಕಾ ಒಬ್ಬಳಾಗಿದ್ದಳು. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲ ಸಚಿವಾಲಯದಿಂದ ಈ ವಿಶೇಷ ಆಹ್ವಾನ ಬಂದಿದೆ.
ಇದು ನನ್ನ ಅತಿ ದೊಡ್ಡ ಕನಸು, ನನಗೆ 10ನೇ ತರಗತಿಯ ಸಿಬಿಎಸ್ಸಿ ಪರೀಕ್ಷೆಯಲ್ಲಿ ಶೇ. 99.2 ಅಂಕಗಳು ಬಂದಿತ್ತು. ಗಣರಾಜ್ಯೋತ್ಸವದ ಪರೇಡ್ ವೀಕ್ಷಿಸಲು ನಾನು ಕಾತುರಳಾಗಿದ್ದೇನೆ, ಪ್ರಧಾನ ಮಂತ್ರಿಗಳ ಜೊತೆ ಕುಳಿತು ಪರೇಡ್ ವೀಕ್ಷಿಸಲು ಅವಕಾಶ ನೀಡಿರುವ ಮಾನವ ಸಂಪನ್ಮೂಲ ಇಲಾಖೆಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.