ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಮಾಡಲು ಅವಕಾಶ ನೀಡದ್ದಕ್ಕೆ ಸಹಪಾಠಿಗೆ ಚಾಕು ಇರಿತ!

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯಲ್ಲಿ ಕಾಪಿ ಮಾಡಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯಲ್ಲಿ ಕಾಪಿ ಮಾಡಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.
16 ವರ್ಷದ ವಿದ್ಯಾರ್ಥಿ ಈ ಕೃತ್ಯವೆಸಗಿದ್ದು ಕಾಮಾಕ್ಷಿಪಾಳ್ಯದಲ್ಲಿನ ಮೇರಿಯಾ ಸದನ ಸ್ಕೂಲ್‍ನಲ್ಲಿ ಈ ಘಟನೆ ವರದಿಯಾಗಿದೆ.
14 ಜನವರಿಯಿಂದಲೂ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ನಡೆಯುತ್ತಿದೆ.ಸೋಮವಾರ ಸಮಾಜಶಾಸ್ತ್ರ ವಿಷಯದ ಪರೀಕ್ಷೆ ನಡೆಯುತ್ತಿತ್ತು. ಆಗ ಒಟ್ಟಾರೆ 49  ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದೇ ಕೊಠಡಿಯ ಕಡೆ ಬೆಂಚ್ ನ ವಿದ್ಯಾರ್ಥಿಯೊಬ್ಬ ತನ್ನ ಮುಂದಿದ್ದವನಿಗೆ ಉತ್ತರ ಪತ್ರಿಕೆ ನೀಡಲು ಕೇಳೀದ್ದಾನೆ. ಇದಕ್ಕೆ ಆ ಇನ್ನೊಬ್ಬ ವಿದ್ಯಾರ್ಥಿ "ನಾನಿನ್ನೂ ಬರೆಯುವುದಿದೆ, ಈಗಲೇ ನೀಡಲು ಆಗಲ್ಲ" ಎಂದಿದ್ದನು. ಆಗ ಸುಮ್ಮನಾಗಿದ್ದ ಆರೋಪಿ ವಿದ್ಯಾರ್ಥಿಯು ಮತ್ತೆ 11 ಗಂಟೆ ಸುಮಾರಿಗೆ ಉತ್ತರ ಪತ್ರಿಕೆ ಕೇಳಲು ಮತ್ತೊಬ್ಬ ವಿದ್ಯಾರ್ಥಿ ತನ್ನ ಉತ್ತರ ಪತ್ರಿಕೆ ನೀಡಲು ನಿರಾಕರಿಸಿದ್ದಾನೆ.
ಇದರಿಂದ ಸಿಟ್ಟಿಗೆದ್ದ ವಿದ್ಯಾರ್ಥಿಯು ಪರೀಕ್ಷೆ ಮುಗಿದ ಬಳಿಕ ಶಾಲಾ ಅವರಣದಲ್ಲೇ ತನ್ನ ಸಹಪಾಠಿಗೆ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ಗಾಯಗೊಂಡ ವಿದ್ಯಾರ್ಥಿಯನ್ನು ಸಹಪಾಠಿಗಳು, ಶಿಕ್ಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಂತೆಯೇ ಆರೋಪಿ ವಿದ್ಯಾರ್ಥಿಯನ್ನು ಸಹ ಪೋಲೀಸರಿಗೆ ಒಪ್ಪಿಸಿದ್ದಾರೆ.
ಪೋಲೀಸರ ವಿಚಾರಣೆ ವೇಳೆ "ತಾನು ಸಹಪಾಠಿ ವಿದ್ಯಾರ್ಥಿಯನ್ನು ಉತ್ತರ ಪತ್ರಿಕೆಗಾಗಿ ಕೇಳಿದೆ, ಆತ ನೀಡದ ಕಾರಣ ನನಗೆ ನಿರಾಶೆಯಾಗಿತ್ತು." ಎಂದಿದ್ದಾನೆ.ಇನ್ನು ಆರೊಪಿ ವಿದ್ಯಾರ್ಥಿಯು ಶಾಲೆಯ ಇತರೆ ವಿದ್ಯರ್ಥಿಗಳನ್ನು ಹೊಡೆಯುವುದು, ತೊಂದರೆ ಕೊಡುವುದರ ಬಗ್ಗೆ ತರಗತಿಯ ಬೇರೆ ವಿದ್ಯಾರ್ಥಿಗಳು ಸಹ ಶಿಕ್ಷಕರಿಗೆ ಈ ಹಿಂದೆ ದೂರಿತ್ತಿದ್ದರು. ಇದರ ಸಂಬಂಧ ಶಾಲಾ ಶಿಕ್ಷಕರು ಬಾಲಕನ ಪೋಷಕರನ್ನು ಕರೆದು ತಿಳುವಳಿಕೆ ನಿಡುವಂತೆ ಎಚ್ಚರಿಸಿದ್ದರು ಎಂದು ಪೋಲೀಸರು ಘೇಳಿದ್ದಾರೆ. 
ಸದ್ಯ ಕೊಲೆ ಯತ್ನದ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಯು ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರಾಗಿ ಶಿಕ್ಷೆ ಅನುಭವಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT