ವಿಧಾನಸೌಧ 
ರಾಜ್ಯ

ವಿಧಾನಸೌಧದ ಮುಖ್ಯಮಂತ್ರಿ ಕೊಠಡಿ ಬಾಡಿಗೆಗೆ ಕೊಡಿ: ಸ್ಪೀಕರ್ ಗೆ ರಿಯಲ್ ಎಸ್ಟೇಟ್ ಉದ್ಯಮಿ ಪತ್ರ!

ಬೆಂಗಳುರಿನಲ್ಲಿ ಬಾಡಿಗೆಗೆ ಮನೆ ಪಡೆಯುವುದಕ್ಕೆ ನಾನಾ ಮಾರ್ಗಗಳಿವೆ. ಆದರೆ ಇಲ್ಲೊಬ್ಬ ವ್ಯಕ್ತಿ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕೋಣೆಯನ್ನೇ ಬಾಡಿಗೆಗೆ ಕೊಡಿ ಎಂದು....

ಬೆಂಗಳೂರು: ಬೆಂಗಳುರಿನಲ್ಲಿ ಬಾಡಿಗೆಗೆ ಮನೆ ಪಡೆಯುವುದಕ್ಕೆ ನಾನಾ ಮಾರ್ಗಗಳಿವೆ. ಆದರೆ ಇಲ್ಲೊಬ್ಬ ವ್ಯಕ್ತಿ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕೋಣೆಯನ್ನೇ ಬಾಡಿಗೆಗೆ ಕೊಡಿ ಎಂದು ವಿಧಾನಸಭೆ ಸಭಾಪತಿ  ರಮೇಶ್ ಕುಮಾರ್ ಅವರ ಮುಂದೆ ಬೇಡಿಕೆ ಇಟ್ಟಿದ್ದಾನೆ. ಶಾಸಕರೆಲ್ಲಾ ಆಪರೇಷನ್ ಕಮಲಕ್ಕೆ ಅಂಜಿ ರೆಸಾರ್ಟ್ ರಾಜಕೀಯ ನಡೆಸುತ್ತಿದ್ದಾರೆ. ಹಾಗಾಗಿ ವಿಧಾನಸೌಧದಲ್ಲಿನ ಮುಖ್ಯಮಂತ್ರಿಗಳ ಕೋಣೆಯನ್ನು ಬಾಡಿಗೆಗೆ ಬಿಡಿ ಎಂದು ಅವನು ಸ್ಪೀಕರ್ ಬಳಿ ಮನವಿ ಮಾಡಿದ್ದಾನೆ.
ಶೇಶಾದ್ರಿಪುರಂ ನಲ್ಲಿ ಸಣ್ಣ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಬಿಎಸ್ ಗೌಡ (38) ಈ ಮನವಿ ಸಲ್ಲಿಸಿದ್ದಾರೆ. ಈ ಸಂಬಧ ಸಭಾಪತಿ ರಮೇಶ್ ಕುಮಾರ ಅವರಿಗೆ ಪತ್ರ ಬರೆದಿರುವ ಗೌಡ "ವಿಧಾನಸೌಧದ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಯಡಿಯೂರಪ್ಪ ಅವರ ಕೊಠಡಿಗಳು ಸೇರಿ ಅನೇಕ ಕೊಠಡಿಗಳು ಹಲವು ದಿನಗಳಿಂದ ಬೀಗ ಹಾಕಿರುವುದನ್ನು ನಾನು ಗಮನಿಸಿದ್ದೇನೆ. ನನಗೆ ಕೋಣೆಗಳ ಅಗತ್ಯವಿದೆ. ನೀವೇನಾದರೂ (ಸಭಾಪತಿ) ಈ ಕೋಣೆಗಳನ್ನು ನನಗೆ ಬಾಡಿಗೆಗೆ ನೀಡಿದ್ದಾದರೆ ನಾನು ನಿಮಗೆ ಕೃತಜ್ಞನಾಗಿರುತ್ತೇನೆ. ಅಲ್ಲದೆ ನಾನು ಇದಕ್ಕಾಗಿ ಬಾಡಿಗೆ ಹಾಗೂ ಮುಂಗಡ ಹಣ ಪಾವತಿ ಮಾಡಲೂ ಸಿದ್ದನಿದ್ದೇನೆ. ಶಾಸಕರು ಇದನ್ನು ಬಳಸದೆ ಉಳಿದಿರುವುದಕ್ಕಿಂತ ನನಗೆ ನೀಡುವುದು ಒಳಿತು.ಹಾಗೆಯೇ ನನಗೆ ನೀಡುವ ಕೋಣೆಗಳ ಬಾಡಿಗೆ ಹಣವನ್ನು ನೀವು ರೈತರ ಸಾಲದ ಮನ್ನಾಗಾಗಿ ಇದನ್ನು ಬಳಸಬಹುದು." ಎಂದು ವಿವರಿಸಿದ್ದಾರೆ.
ಪತ್ರಿಕೆಯೊಡನೆ ಮಾತನಾಡಿದ ಗೌಡ ತಾನು ಪ್ರತಿ ವಾರವೂ ವಿಧಾನಸೌಧಕ್ಕೆ ಭೇಟಿ ನೀಡುತ್ತೇನೆ ಎಂದರು. "ನಾನು ಝಲವು ದಿನಗಳಿಂದ ಈ ಕೋಣೆಗಳು ಲಾಕ್ ಆಗಿರುವುದನ್ನು ಗಮನಿಸಿದ್ದೇನೆ. ನಾವು ಇವರನ್ನು ಚುನಾಯಿಸಿದ್ದೇವೆ. ಇವರು ಸಾರ್ವಜನಿಕರ ಕ್ಷೇಮಕ್ಕಾಗಿ ಕೆಲಸ ಮಾಡಬೇಕು. ಆದರೆ ಅವರು ಸಾರ್ವಜನಿಕರ ಒಳಿತಿಗಾಗಿ ಕೆಲಸ ಮಾಡುವವರಂತೆ ಕಾಣುತ್ತಿಲ್ಲ. ಅವರಿಗೆ ಈ ಕೋಣೆಗಳ ಅಗತ್ಯವೂ ಇಲ್ಲ.ಹಾಗಾಗಿ ಇಂತಹಾ ಕೋಣೆಗಳನ್ನು ಬಾಡಿಗೆಗೆ ನೀಡಿದ್ದಾದರೆ ಇದರಿಂದ ಆದಾಯ ಬರಲಿದೆ. ಆ ಹಣವನ್ನು ರೈತರ ಸಾಲಮನ್ನಾಗೆ ಬಳಸಬಹುದು." ಅವರು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಕೊಠಡಿಗೆ 10,000, ಉಳಿದ ಸಚಿವರು, ಶಾಸಕರ ಕೊಠಡಿಗಳಿಗೆ ತಲಾ 5,000 ರು. ನೀಡಲು ಗೌಡ ತಯಾರಿದ್ದಾರೆ. 
ಇನ್ನು ಈ ಸಂಬಂಧ ಪ್ರತಿಕ್ರಿಯೆ ನೀಡಲು ಸಭಾಪತಿ ರಮೇಶ್ ಕುಮಾರ ಸಂಪರ್ಕಕ್ಕೆ ಸಿಕ್ಕಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT