ಬೆಂಗಳೂರು: ರಾಜ್ಯದಲ್ಲಿ ನಡೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯ ಕರ್ನಾಟಕ ಎಂದು ಭಾರತ ಚುನಾವಣಾ ಆಯೋಗ ಗುರುತಿಸಿ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ.
“ರಾಷ್ಟ್ರೀಯ ಮತದಾರರ ದಿನಾಚರಣೆ – 2019”ರ ಅಂಗವಾಗಿ ಚುನಾವಣಾ ಆಯೋಗ ನವದೆಹಲಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳಿಂದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮಗಳು ಇಡೀ ದೇಶಕ್ಕೆ ಮಾದರಿಯಾಗಿತ್ತು. ಭಾರತ ಚುನಾವಣಾ ಆಯೋಗ ಮತದಾರರ ಜಾಗೃತಿಗಾಗಿ ಪುಸ್ತಕ ಬಿಡುಗಡೆ ಮಾಡಿ ಕೈಪಿಡಿಗಳನ್ನು ಕನ್ನಡದಲ್ಲಿ ಅನುವಾದಿಸಿ ಪ್ರಕಟಿಸಲಾಗಿತ್ತು.
ಮತದಾನ ಮಾಡುವ ಕುರಿತು ಇವಿಎಮ್ ಮತ್ತು ವಿವಿಪ್ಯಾಟ್ ಮಾದರಿಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಅಳವಡಿಸಿ ಜನರಿಗೆ ಬಳಸಿ ನೋಡಿ ಅನುಭವ ನೀಡುವ ಜಾಗೃತಿ ಕೈಗೊಂಡಿದ್ದು, ವಿಶೇಷವಾಗಿ ದಿವ್ಯಾಂಗ ಮತದಾರರು ಮತದಾನ ಮಾಡಲು ಮನೆಯಿಂದ - ಮತಗಟ್ಟೆಗೆ - ಮರಳಿ ಮನೆಗೆ ಬಿಡಲು ವಾಹನ ವ್ಯವಸ್ಥೆ ಮಾಡಲಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos