ಅಮಿತ್ ಸಿಂಗ್ ಮತ್ತು ಕೆ.ವಿ ಶರತ್ ಚಂದ್ರ 
ರಾಜ್ಯ

ಮೈಸೂರು ಎಸ್ ಪಿ ವಿರುದ್ಧ ಪ್ರಕರಣ ದಾಖಲಿಸಿಲು ಐಜಿಪಿ ಅನುಮತಿ ಕೋರಿದ ಪೊಲೀಸ್ ಇನ್ಸ್ ಪೆಕ್ಟರ್

ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ವಿರುದ್ಧ ದೂರು ದಾಖಲಿಸಲು ಪೊಲೀಸ್ ಇನ್ಸ್ ಪೆಕ್ಟರ್ ಐಜಿಪಿ ಅವರ ಅನುಮತಿ ಕೋರಿದ್ದಾರೆ. ಇದೇ ಮೊದಲ ಬಾರಿಗೆ .,..

ಮಂಡ್ಯ: ಮೈಸೂರು ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ವಿರುದ್ಧ ದೂರು ದಾಖಲಿಸಲು ಪೊಲೀಸ್ ಇನ್ಸ್ ಪೆಕ್ಟರ್ ಐಜಿಪಿ ಅವರ ಅನುಮತಿ ಕೋರಿದ್ದಾರೆ.  ಇದೇ ಮೊದಲ ಬಾರಿಗೆ ಅಧೀನ ಅಧಿಕಾರಿಯೊಬ್ಬರು ತಮ್ಮ ಮೇಲಧಿಕಾರಿ ವಿರುದ್ಧ  ಕಾನೂನು ಹೋರಾಟ ಮಾಡಲು ಮುಂದಾಗಿದ್ದಾರೆ.  
ಜನವರಿ 15 ರಂದು ಎಸ್ ಪಿ ಅಮಿತ್ ಸಿಂಗ್ ನನ್ನನ್ನು ಮತ್ತು ನನ್ನ ಪೋಷಕರ ವಿರುದ್ಧ ತುಚ್ಛ ಮಾತುಗಳಿಂದ ನಿಂದಿಸಿದ್ದಾರೆ. ಇದರಿಂದ ನನ್ನ ಕುಟುಂಬಸ್ಥರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ, ಅವರಿಗೆ ಅವಮಾನವಾಗಿದೆ, ನನ್ನ ತಾಯಿಯ ಭಾವನೆಗಳಿಗೆ ನೋವಾಗಿದೆ, ಇದನ್ನೆಲ್ಲಾ ವಿದ್ಯುನ್ಮಾನ ಮಾಧ್ಯಮಗಳು ಬಿತ್ತರಿಸಿದ್ದು ನನ್ನ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ,  ಹೀಗಾಗಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲು ಅನುಮತಿ ಕೋರುತ್ತಿರುವುದಾಗಿ ಇನ್ಸ್ ಪೆಕ್ಟರ್ ರವಿ ದಕ್ಷಮಿ ವಲಯ ಐಜಿ ಕೆ,ವಿ ಶರತ್ ಚಂದ್ರ ಅವರಿಗೆ ಪತ್ರ ಬರೆದಿದ್ದಾರೆ.
ಸದ್ಯ ನಾನು ಹಾಸನದಲ್ಲಿದ್ದೇನೆ,  ಒಂದು ವೇಳೆ ನನ್ನ ಕಚೇರಿಗೆ ಪುತ್ರ ತಲುಪಿದ್ದರೇ  ವಾಪಸ್ ಮೈಸೂರಿಗೆ ಆಗಮಿಸಿದ ನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ  ಐಜಿಪಿ ಕೆ.ವಿ ಶರತ್ತಿ ಚಂದ್ರ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT