ಬೆಂಗಳೂರು: ದಕ್ಷಿಣ ಏಷ್ಯಾ ಡಿಎಸ್ಸಿ ಪ್ರತಿಷ್ಠಿತ ಪ್ರಶಸ್ತಿಗೆ ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್ ಕಾಯ್ಕಿಣಿ ಭಾಜನರಾಗಿದ್ದಾರೆ.
ಜಯಂತ್ ಕಾಯ್ಕಿಣಿ ಅವರ ನೋ ಪ್ರೆಸೆಂಟ್ಸ್ ಪ್ಲೀಸ್ (No Presents Please)ಕಥಾ ಸಂಕಲನಕ್ಕೆ ಈ ಪ್ರಶಸ್ತಿ ಸಿಕ್ಕಿದ್ದು, ತೇಜಸ್ವಿನಿ ನಿರಂಜನ್ ಅವರು ಇಂಗ್ಲಿಷ್ಗೆ ಭಾಷಾಂತರ ಮಾಡಿದ್ದರು.
ಜಯಂತ್ ಕಾಯ್ಕಿಣಿ ಅವರ ಈ ಸಾಧನೆಗೆ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಸೇರಿದಂತೆ ಹಲವು ಮಂದಿ ಗಣ್ಯರು ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.