ರಾಜ್ಯ

ಕೊಪ್ಪಳ: ಧ್ವಜಾರೋಹಣಕ್ಕೆ ತೆರಳುತ್ತಿದ್ದಾಗ ಹೃದಯಾಘಾತ, ಮಾರ್ಗ ಮಧ್ಯದಲ್ಲೇ ಶಿಕ್ಷಕ ಸಾವು!

Raghavendra Adiga
ಕೊಪ್ಪಳ: ಗಣರಾಜ್ಯೋತ್ಸವದಂದು ಶಾಲೆಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಮಾರ್ಗಮದ್ಯದಲ್ಲೇ ಹೃದಯಾಘಾತವಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ನಗರ ಕಿನ್ನಾಳ ರಸ್ತೆಯಲ್ಲಿ ಈ ಘಟನೆ ನಡೆಇದ್ದು ಕೂಕನಪಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗಪ್ಪ ಏಳುಭಾವಿ (50) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
 ಅಧಿಕ ರಕ್ತದೊತ್ತದಡಿಂದ ಬಳಲುತ್ತಿದ್ದ ನಾಗಪ್ಪ ಇಂದು ಶಾಲೆಯಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ನಡೆದುಕೊಂಡು ಹೊರಟಿದ್ದರು.
ಘಟನೆ ಬಗ್ಗೆ ಮಾಹಿತಿ ಪಡೆದ ಕೊಪ್ಪಳ ನಗರ ಪೋಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
SCROLL FOR NEXT