ಮೇಯರ್ ಗಂಗಾಂಬಿಕೆ 
ರಾಜ್ಯ

ಮೇಯರ್ ಸಿಟಿ ರೌಂಡ್ಸ್ : ಮೇಲ್ಸುತುವೆಗೆ ಬಣ್ಣ ಬಳಿದ ಗಂಗಾಂಬಿಕೆ ಮಲ್ಲಿಕಾರ್ಜುನ್

ಸಿಟಿ ರೌಂಡ್ಸ್ ಕೈಗೊಂಡ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಇಂದು ಬೆಳಗ್ಗೆ ಕೆ. ಆರ್ . ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಮಾರುಕಟ್ಟೆಯಲ್ಲಿ ಕಸದ ರಾಶಿ ಕಂಡು ಗರಂ ಆದರು.

ಬೆಂಗಳೂರು:ಸಿಟಿ ರೌಂಡ್ಸ್  ಕೈಗೊಂಡ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್  ಇಂದು ಬೆಳಗ್ಗೆ ಕೆ. ಆರ್ . ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಮಾರುಕಟ್ಟೆಯಲ್ಲಿ  ಕಸದ ರಾಶಿ ಕಂಡು ಗರಂ ಆದರು.ಉಪಮೇಯರ್ ಭದ್ರೇಗೌಡ ಅವರೊಂದಿಗೆ ಬೆಳಗ್ಗೆ  ಮಾರುಕಟ್ಟೆಗೆ ಭೇಟಿ ನೀಡಿ ಕಸದ ರಾಶಿ ಕಂಡು ಸಿಟ್ಟಿಗೆದ್ದರು.

ನಾಲ್ಕು ಜೆಸಿಬಿಗಳನ್ನು ತಕ್ಷಣವೇ ಮಾರುಕಟ್ಟೆಗೆ ತರಿಸಿದ ಮೇಯರ್,  ಅಲ್ಲಿ ಬಿದ್ದಿದ್ದ ಒಣಗಿದ ಹೂವುಗಳು,ಹಸಿ ಕಸ ಮತ್ತಿತರ ತ್ಯಾಜ್ಯವನ್ನು ಟ್ರಾಕ್ಟರ್ ಗಳಿಗೆ ತುಂಬಿಸಿ ಸಂಸ್ಕರಣಾ ಘಟಕಗಳಿಗೆ ರವಾನಿಸಿದರು. ಸಂಬಂಧಪಟ್ಟ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದ್ದಾರೆ.

ನಂತರ ಸಿರ್ಸಿ ಮೇಲ್ಸೇತುವೆ ಬಳಿ ಬಿದ್ದಿದ್ದ ಕಸದ ರಾಶಿಯನ್ನು ತೆರುವುಗೊಳಿಸಿದರಲ್ಲದೇ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸೇರಿ ಗೋಡೆಗಳಿಗೆ  ಬಣ್ಣ ಬಳಿದರು.

ಸೇತುವೆಯ ಪಿಲ್ಲರ್ ಗಳಿಗೂ ತಾವೇ ಖುದ್ಧು ನಿಂತು ಬಣ್ಣ ಬಳಿದರಲ್ಲದೇ ಈ ಪ್ರದೇಶವನ್ನು ಚೊಕ್ಕಟ್ಟವಾಗಿಟ್ಟುಕೊಳ್ಳದಿದ್ದರೆ ಕ್ರಮ ಕೈಗೊಳ್ಳುವುದಾಗಿ ಮೇಯರ್ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT