ಎಂ ಬಿ ಪಾಟೀಲ್ 
ರಾಜ್ಯ

ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದೆ ಅವಮಾನ ಮಾಡಿದೆ-ಎಂ ಬಿ ಪಾಟೀಲ್

ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದೆ ಅವಮಾನ ಮಾಡಿದೆ ಎಂದು ಗೃಹ ಸಚಿವ ...

ಬೆಂಗಳೂರು: ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದೆ ಅವಮಾನ ಮಾಡಿದೆ ಎಂದು ಗೃಹ ಸಚಿವ ಎಂ ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಸ್ವಾತಂತ್ರ್ಯ ಪೂರ್ವದಿಂದಲೂ ಸರ್ಕಾರ ಮಾಡಲಾರದ ಕೆಲಸವನ್ನು ತಮ್ಮ ಸೇವಾ ಸಂಸ್ಥೆಗಳ ಮೂಲಕ ಮಾಡಿ ತೋರಿಸಿ ಕೋಟ್ಯಂತರ ಜನರ ಹೃದಯದಲ್ಲಿ ಸಿದ್ದಗಂಗಾ ಶ್ರೀಗಳು ಸ್ಥಾನ ಪಡೆದಿದ್ದಾರೆ. ಲಕ್ಷಾಂತರ ಬಡ ಶಾಲಾ ಮಕ್ಕಳಿಗೆ ಆಶ್ರಯ ನೀಡಿದ ತನ್ಮೂಲಕ ರಾಜ್ಯ ಮತ್ತು ತುಮಕೂರನ್ನು ಬೆಳೆಸಿದ 111 ವರ್ಷಗಳ ಪರಮಪೂಜ್ಯರ ಸೇವೆಯನ್ನು ಅವಮಾನಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಮೂಲಕ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿಯನ್ನು ಅಪಮೌಲ್ಯಕ್ಕೆ ಈಡು ಮಾಡಿದೆ ಎಂದು ಆರೋಪಿಸಿದ್ದಾರೆ.

ಜಾತ್ಯತೀತವಾಗಿ, ಪಕ್ಷಾತೀತವಾಗಿ ವಿನಂತಿ ಮಾಡಿಕೊಂಡರೂ ಸಹ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರ ಡಾ ಶಿವಕುಮಾರ ಮಹಾಸ್ವಾಮಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡದೆ ಇರುವ ಮೂಲಕ ಕರ್ನಾಟಕ ಕುರಿತು ತನ್ನ ಅಸಡ್ಡೆ ಮುಂದುವರಿಸಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT