ಎಂ ಬಿ ಪಾಟೀಲ್ 
ರಾಜ್ಯ

ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದೆ ಅವಮಾನ ಮಾಡಿದೆ-ಎಂ ಬಿ ಪಾಟೀಲ್

ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದೆ ಅವಮಾನ ಮಾಡಿದೆ ಎಂದು ಗೃಹ ಸಚಿವ ...

ಬೆಂಗಳೂರು: ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದೆ ಅವಮಾನ ಮಾಡಿದೆ ಎಂದು ಗೃಹ ಸಚಿವ ಎಂ ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಸ್ವಾತಂತ್ರ್ಯ ಪೂರ್ವದಿಂದಲೂ ಸರ್ಕಾರ ಮಾಡಲಾರದ ಕೆಲಸವನ್ನು ತಮ್ಮ ಸೇವಾ ಸಂಸ್ಥೆಗಳ ಮೂಲಕ ಮಾಡಿ ತೋರಿಸಿ ಕೋಟ್ಯಂತರ ಜನರ ಹೃದಯದಲ್ಲಿ ಸಿದ್ದಗಂಗಾ ಶ್ರೀಗಳು ಸ್ಥಾನ ಪಡೆದಿದ್ದಾರೆ. ಲಕ್ಷಾಂತರ ಬಡ ಶಾಲಾ ಮಕ್ಕಳಿಗೆ ಆಶ್ರಯ ನೀಡಿದ ತನ್ಮೂಲಕ ರಾಜ್ಯ ಮತ್ತು ತುಮಕೂರನ್ನು ಬೆಳೆಸಿದ 111 ವರ್ಷಗಳ ಪರಮಪೂಜ್ಯರ ಸೇವೆಯನ್ನು ಅವಮಾನಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಮೂಲಕ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿಯನ್ನು ಅಪಮೌಲ್ಯಕ್ಕೆ ಈಡು ಮಾಡಿದೆ ಎಂದು ಆರೋಪಿಸಿದ್ದಾರೆ.

ಜಾತ್ಯತೀತವಾಗಿ, ಪಕ್ಷಾತೀತವಾಗಿ ವಿನಂತಿ ಮಾಡಿಕೊಂಡರೂ ಸಹ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರ ಡಾ ಶಿವಕುಮಾರ ಮಹಾಸ್ವಾಮಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡದೆ ಇರುವ ಮೂಲಕ ಕರ್ನಾಟಕ ಕುರಿತು ತನ್ನ ಅಸಡ್ಡೆ ಮುಂದುವರಿಸಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT