ಸಾಂದರ್ಭಿಕ ಚಿತ್ರ 
ರಾಜ್ಯ

'ರೈತ' ನನ್ನು ಮದುವೆಯಾಗಿ, 'ಶಾದಿ ಭಾಗ್ಯ' ಯೋಜನೆಯಡಿ 1 ಲಕ್ಷ ರೂ. ಹಣ ಪಡೆಯಿರಿ!

ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ....

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.
ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.
ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಎನ್.ಕೆ ಭಟ್ ಹೇಳಿದ್ದಾರೆ.
ಸಮಸ್ಯೆ ಏನು? ಉತ್ತರ ಕನ್ನಡ ಜಿಲ್ಲೆಯ.ಹೆಣ್ಣುಮಕ್ಕಳು ಬೆಂಗಳೂರಿನಲ್ಲಿರುವ ಅದರಲ್ಲೂ ಐಟಿ ವಿಭಾಗದಲ್ಲಿ ಕೆಲಸ ಮಾಡುವ ವರನನ್ನು ಮದುವೆಯಾಗಲು ಹೆಚ್ಚಿನ ಆದ್ಯತೆ ನೀಡುತ್ತಾರೆ, ಹೀಗಾಗಿ ರೈತ ವರನಿಗೆ ವಿವಾಹಕ್ಕೆ ವಧು ಸಿಗುತ್ತಿಲ್ಲ, 
ಈ ಯೋಜನೆಗಳಿಗೆ ಕೆಲಸವು ಷರತ್ತುಗಳನ್ನು ವಿಧಿಸಲಾಗಿದೆ, ವಿವಾಹವಾಗುತ್ತಿರುವ ಜೋಡಿಯ ಕುಟುಂಬದ ಒಬ್ಬ ಸದಸ್ಯರು ಸೊಸೈಟಿಯ ಸದಸ್ಯರಾಗಿರಬೇಕು,  ವಾರ್ಷಿಕವಾಗಿ ಸುಮಾರು 3 ಲಕ್ಷ ರು.ವಹಿವಾಟು ತೋರಿಸಬೇಕು, 
ಈ ಆಫರ್ ಎಲ್ಲಾ ಜಾತಿಯ ಜನರಿಗೂ ಅನ್ವಯವಾಗುತ್ತಿದೆ, ಯಾಲ್ಲಾಪುರ ತಾಲೂಕಿನ 22 ಗ್ರಾಮಗಳಿಗೂ ಈ ಆಫರ್ ಸಿಗಲಿದೆ, ಸೊಸೈಟಿಯಲ್ಲಿ ಸುಮಾರು 2ಸಾವಿರ ಸದಸ್ಯರಿದ್ದಾರೆ, 
ಉತ್ತಮ ಕುಟುಂಬದ ರೈತರ ಮಕ್ಕಳಿಗೂ ಕೆಲವೊಂದು ವೇಳೆ ವಧು ಸಿಗುತ್ತಿಲ್ಲ,  ಹೀಗಾಗಿ ಈ ಆಫರ್ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT