ಮೈಸೂರು, ಹಾಸನದಲ್ಲಿ ಎಟಿಎಂ ಕಳ್ಳತನ ಮಾಡುತ್ತಿದ್ದ ಟಾಂಜೇನಿಯಾದ ವ್ಯಕ್ತಿ ಬಂಧನ 
ರಾಜ್ಯ

ಮೈಸೂರು, ಹಾಸನದಲ್ಲಿ ಎಟಿಎಂ ಕಳ್ಳತನ ಮಾಡುತ್ತಿದ್ದ ಟಾಂಜೇನಿಯಾದ ವ್ಯಕ್ತಿ ಬಂಧನ

ಮೈಸೂರು-ಹಾಸನ ಜಿಲ್ಲೆಗಳಲ್ಲಿ ಎಟಿಎಂ ಕಳ್ಳತನ ಮಾಡುತ್ತಿದ್ದ ಟಾಂಜೇನಿಯಾದ ವ್ಯಕ್ತಿಯನ್ನು ಹೊಳೆನರಸಿಪುರ ಪೊಲೀಸರು ಬಂಧಿಸಿದ್ದಾರೆ.

ಹಾಸನ: ಮೈಸೂರು-ಹಾಸನ ಜಿಲ್ಲೆಗಳಲ್ಲಿ ಎಟಿಎಂ ಕಳ್ಳತನ ಮಾಡುತ್ತಿದ್ದ ಟಾಂಜೇನಿಯಾದ ವ್ಯಕ್ತಿಯನ್ನು ಹೊಳೆನರಸಿಪುರ ಪೊಲೀಸರು ಬಂಧಿಸಿದ್ದಾರೆ. 
ನಕಲಿ ಕಾರ್ಡ್ ಹಾಗೂ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸಿ ಎಟಿಎಂ ನಲ್ಲಿ ಟಾಂಜೇನಿಯಾದ ಮಹಿಳೆ ಹಣ ದೋಚುತ್ತಿದ್ದ. ಆಂಡ್ರ್ಯೂ(28) ಬಂಧಿತ ವ್ಯಕ್ತಿಯಾಗಿದ್ದು, ಎಸ್ ಪಿ ಎಎನ್ ಪ್ರಕಾಶ್ ಗೌಡ ವ್ಯಕ್ತಿಯ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಆಂಡ್ರ್ಯೂ  ಈ ವರೆಗೂ 8.50 ಲಕ್ಷ ರೂಪಾಯಿ ಕಳ್ಳತನ ಮಾಡಿದ್ದಾನೆ. 
ಮೈಕ್ರೋ ಕ್ಯಾಮರಾ, ಕಾರ್ಡ್ ರೀಡರ್,  ಚೀನಾದಿಂದ ತರಲಾಗಿದ್ದ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಕೆ ಮಾಡಿ ಟಾಂಜೇನಿಯಾ ವ್ಯಕ್ತಿ ಎಟಿಎಂಗಳಲ್ಲಿ ಹಣ ದೋಚುತ್ತಿದ್ದಳು, ಈತನ ವಿರುದ್ಧ 4 ಬೇರೆ ಬೇರೆ ರೀತಿಯ ಪ್ರಕರಣಗಳನ್ನು ದಾಖಲಿಸಲಾಗಿದೆ. ಹೊಳೆನರಸಿಪುರದ ಎಟಿಎಂ ನಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾಗ ಆಂಡ್ರ್ಯೂ ನ್ನು ಪೊಲೀಸರು ಬಂಧಿಸಿದ್ದಾರೆ. ಈತ ವಿದ್ಯಾಭ್ಯಾಸಕ್ಕಾಗಿ 2014 ರಲ್ಲಿ ಮೈಸೂರಿಗೆ ಆಗಮಿಸಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಸಾಯೋವರೆಗೂ ಜೈಲು!

ಬಿಹಾರ ಚುನಾವಣೆ ಸೋಲಿನ ಬೆನ್ನಲ್ಲೇ 'ಮಹಾಘಟಬಂಧನ್' ಗೆ ತಿಲಾಂಜಲಿ; ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ 'ಮಹಾ' ನಿರ್ಧಾರ!

ಬಿಹಾರದಲ್ಲಿ ಟೈಗರ್‌ ಅಬಿ ಜಿಂದಾ ಹೈ (ನೇರ ನೋಟ)

ಬಿಹಾರ ಚುನಾವಣೆ: 3 ಲಕ್ಷ ಮತಗಳ ಏರಿಕೆ ಬಗ್ಗೆ ಕಾಂಗ್ರೆಸ್ ನಿಂದ ಮತ್ತೆ ಕಿರಿಕ್; ಚುನಾವಣಾ ಆಯೋಗ ಹೇಳಿದ್ದೇನು?

SCROLL FOR NEXT