ಸಂಗ್ರಹ ಚಿತ್ರ 
ರಾಜ್ಯ

ಯುವಕರಿಗೂ ಸೇಫ್​ ಅಲ್ಲ ಮೆಜೆಸ್ಟಿಕ್: '500 ರೂ ಕೊಟ್ಟು ಬಾ' ಎಂದ ಮಹಿಳೆಯರು, ಆಮೇಲೆ ನಡೆದ್ದದು ಆಘಾತಕಾರಿ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಹಿಳಾ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಬಸ್ಸಿಗಾಗಿ ಕಾಯುತ್ತಿದ್ದ ಯುವಕನಿಗೆ ಮಹಿಳೆಯರ ತಂಡವೊಂದು 'ಆಮಿಷ' ಒಡ್ಡಿ ಕಾರಿನಲ್ಲಿ ಕೂರಿಸಿಕೊಂಡು ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಹಿಳಾ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಬಸ್ಸಿಗಾಗಿ ಕಾಯುತ್ತಿದ್ದ ಯುವಕನಿಗೆ ಮಹಿಳೆಯರ ತಂಡವೊಂದು 'ಆಮಿಷ' ಒಡ್ಡಿ ಕಾರಿನಲ್ಲಿ ಕೂರಿಸಿಕೊಂಡು ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರಿನ ಹೃದಯಭಾಗದಲ್ಲಿರುವ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಇದೀಗ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಮಾಧ್ಯಮವೊಂದರ ವರದಿ ಪ್ರಕಾರ ಮಣಿಕಂಠ ಎಂಬ ಯುವಕ ಕಳೆದ ಶನಿವಾರ ರಾತ್ರಿ ಸುಮಾರು 12.15ರ ಸುಮಾರಿನಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ. ಈ ವೇಳೆ ಅಲ್ಲಿಗೆ ಆಗಮಿಸಿದ ಇಬ್ಬರು ಮಹಿಳೆಯರು ಆತನಿಗೆ 500 ರೂ ಕೊಟ್ಟು ಲೈಂಗಿಕ ಕ್ರಿಯೆಗೆ ಬಾ ಎಂದು ಕರೆದಿದ್ದಾರೆ. ಆರಂಭದಲ್ಲಿ ಮಣಿಕಂಠ ಇದಕ್ಕೆ ನಿರಾಕರಿಸಿದನಾದರೂ, ಮಹಿಳೆಯರೇ ಆತನನ್ನು ಬಲವಂತವಾಗಿ ಕರೆದೊಯ್ದು ಆಟೋದಲ್ಲಿ ಕೂರಿಸಿದ್ದಾರೆ.
ಬಳಿಕ ಆತನಿಂದ ಆತನ ಪರ್ಸ್ ಹಾಗೂ ಹಣ, ಚೈನ್ ಕಿತ್ತುಕೊಳ್ಳಲು ಮಹಿಳೆಯರು ಯತ್ನಿಸಿದ್ದು, ಈ ವೇಳೆ ಪ್ರತಿರೋಧ ತೋರಿದ ಮಣಿಕಂಠ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಕಿರುಚಾಡಲು ಆರಂಭಿಸಿದ ಮಹಿಳೆಯರು ಆತ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ಕಿರುಚಿಕೊಂಡಿದ್ದಾರೆ. ಅಲ್ಲದೆ ನೀನು ನಮ್ಮ ಮೇಲೆ ಅತ್ಯಾಚಾರ ಮಾಡಿದ್ದೀಯ ಎಂದು ದೂರು ನೀಡುತ್ತೇವೆ. ಜನರನ್ನು ಸೇರಿಸಿ ಗಲಾಟೆ ಮಾಡುತ್ತೇವೆ ಎಂದು ಬೆದರಿಸಿ ಆತನಿಂದ ಪರ್ಸ್, ಹಣ ಮತ್ತು ಚೈನ್ ದೋಚಿ ಪರಾರಿಯಾದ್ದಾರೆ.
ಮಹಿಳೆಯರಿಂದ ಪಾರಾದ ಮಣಿಕಂಠ ಬಳಿಕ ಸಾವರಿಸಿಕೊಂಡು ಸಮೀಪದ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ತೆರಳಿ ಮಹಿಳೆಯರ ವಿರುದ್ಧ ಬೆದರಿಕೆ ಹಾಗೂ ದರೋಡೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT