ಸಂಗ್ರಹ ಚಿತ್ರ 
ರಾಜ್ಯ

ಅಲ್ಪಸಂಖ್ಯಾತ ಆಯೋಗಕ್ಕೆ ಮುಸ್ಲಿಂ ಅಧ್ಯಕ್ಷ ವಿವಾದ: ಸುತ್ತೋಲೆ ಹಿಂಪಡೆದ ರಾಜ್ಯ ಸರ್ಕಾರ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಮುಸ್ಲಿಂ ಸಮುದಾಯದವರನ್ನು ಮಾತ್ರ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಂಬಂಧ 2017ರ ಜು.14 ರಂದು ಅಂಗೀಕರಿಸಲಾಗಿದ್ದ ನಿರ್ಣಯವನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್'ಗೆ ಬುಧವಾರ ತಿಳಿಸಿದೆ...

ಬೆಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಮುಸ್ಲಿಂ ಸಮುದಾಯದವರನ್ನು ಮಾತ್ರ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಂಬಂಧ 2017ರ ಜು.14 ರಂದು ಅಂಗೀಕರಿಸಲಾಗಿದ್ದ ನಿರ್ಣಯವನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್'ಗೆ ಬುಧವಾರ ತಿಳಿಸಿದೆ. 
ರಾಜ್ಯ ಸರ್ಕಾರದ ನಿರ್ಣಯ ಪ್ರಶ್ನಿಸಿ ಶಿವಮೊಗ್ಗದ ವಕೀಲ ಬಿ.ವಿನೋದ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಬುಧವಾರ ಈ ಅರ್ಜಿ ನ್ಯಾಯಮೂರ್ತಿಗಳಾದ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಂಪ್ರಸಾದ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. 
ಈ ವೇಳೆ ವಿವಾದಿತ ನಿರ್ಣಯ ವಾಪಸ್ ಪಡೆದುಕೊಂಡಿರುವ ಸಂಬಂಧ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಅಕ್ರಂ ಬಾಷಾ 2019ರ ಜ.28ರಂದು ಹೊರಡಿಸಿರುವ ಆದೇಶದ ಪ್ರತಿಯನ್ನು ಪ್ರಮಾಣಪತ್ರದ ಜೊತೆಗೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು. 
ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಕೇವಲ ಮುಸ್ಲಿಮರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತಿದೆ. ಸರತಿ ಆಧಾರದಲ್ಲಿ ಇತರೆ ಅಲ್ಪಸಂಖ್ಯಾತ ಸಮುದಾಯಗಳಿಗೂ ಅವಕಾಶ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT