ಸಚಿವ ಕೆ.ಜೆ.ಜಾರ್ಜ್ 
ರಾಜ್ಯ

ವಿದ್ಯುತ್ ಚಾಲಿತ ವಾಹನ ತಯಾರಿಕೆಗೆ ಬೆಂಗಳೂರು ರಾಜಧಾನಿಯಾಗಬೇಕು: ಸಚಿವ ಕೆ.ಜೆ.ಜಾರ್ಜ್

ದೇಶದಲ್ಲಿ ಬೆಂಗಳೂರು ದೇಶದ ಐಟಿ ರಾಜಧಾನಿಯಾಗಿದ್ದು, ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಗೂ ದೇಶದ ರಾಜಧಾನಿಯಾಗಬೇಕೆಂದು ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಹೇಳಿದ್ದಾರೆ...

ಬೆಂಗಳೂರು: ದೇಶದಲ್ಲಿ ಬೆಂಗಳೂರು ದೇಶದ ಐಟಿ ರಾಜಧಾನಿಯಾಗಿದ್ದು, ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಗೂ ದೇಶದ ರಾಜಧಾನಿಯಾಗಬೇಕೆಂದು ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಹೇಳಿದ್ದಾರೆ. 
ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ವಿದ್ಯುತ್ ವಾಹನಗಳ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಅವರು. ದೇಶದಾದ್ಯಂತ ಎಲೆಕ್ಟ್ರಿಕ್ ವಾಹನಗಳ ಕ್ಷೇತ್ರಕ್ಕೆ ಸುಮಾರು ರೂ.2 ಲಕ್ಷ ಕೋಟಿ ಹೂಡಿಕೆಯಾಗಿದ್ದು, ವಿಶ್ವದ ಮೂರು ಪ್ರಮುಖ ದೇಶಗಳ ದೇಶಗಳ ಪೈಕಿ ಭಾರತ ಕೂಡ ಒಂದಾಗಿದೆ ಎಂದು ಹೇಳಿದ್ದಾರೆ. 
ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದನೆ ಮಾಡುತ್ತಿರುವ ಕಂಪನಿಗಳು ಮುಂದೆ ಬಂದು ಇಂದು ರಾಜ್ಯದಲ್ಲಿ ರೂ.31,000 ಕೋಟಿ ಹಣವನ್ನು ಹೂಡಿಕೆ ಮಾಡಲು ಮುಂದಾಗಿದೆ. ಇದರಿಂದ 55,000 ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಬೆಂಗಳೂರು ಈಗಾಗಲೇ ದೇಶದ ಐಟಿ ನಗರಗಳಿಗೆ ರಾಜಧಾನಿಯಾಗಿದ್ದು, ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿಯೂ ದೇಶದ ರಾಜಧಾನಿಯಾಗಬೇಕೆಂದು ಬಯಸುತ್ತೇನೆ. 
ವಿದ್ಯುತ್ ಚಾಲಿತ ವಾಹನ ಉತ್ಪಾದಿಸುವ ಕಂಪನಿಗಳಿಗೆ ನಮ್ಮ ಸರ್ಕಾರ ಪ್ರೋತ್ಸಾಹ ನೀಡುತ್ತದೆ. ಉತ್ತಮ ವಾತಾವರಣ ಹಾಗೂ ಉತ್ತಮ ಪರಿಸರ ನಿರ್ಮಾಣಕ್ಕೆ ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದರು.
ನಂತರ ಮಾತನಾಡಿದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಅವರು, ಮುಂದಿನ ದಿನಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಯುಗ ಆರಂಬವಾಗಲಿದೆ. ಪರಿಸರ ರಕ್ಷಣೆ, ಆರ್ಥಿಕ ಮಿತವ್ಯಯದಿಂದಾಗಿ ವಿದ್ಯುತ್ ಚಾಲಿತ ವಾಹನಗಳು ಹೆಚ್ಚು ಸೂಕ್ತವಾಗಿದೆ. ಕರ್ನಾಟಕ ಸರ್ಕಾರ ವಿದ್ಯುತ್ ಚಾಲಿತ ವಾಹನಗಳ ನಿಲುಗಡೆ ಸ್ಥಳದಲ್ಲಿ ಶೇ.20 ರಿಂದ 30ರಷ್ಟು ಜಾಗವನ್ನು ಮೀಸಲಿಟ್ಟು, ಅಲ್ಲಿ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸುವ ಚಿಂತನೆ ನಡೆಸುತ್ತಿದೆ. ನಗರಾದ್ಯಂತ 108 ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್ ಗಳನ್ನು ಸ್ಥಾಪಿಸಲಾಗುತ್ತದೆ. ಚಾರ್ಜಿಂಗ್ ಪಾಯಿಂಟ್ ಗಳನ್ನು ಕಂಡು ಹಿಡಿಯಲು ಮೊಬೈಲ್ ಆ್ಯಪ್ ಕೂಡ ಶೀಘ್ರದಲ್ಲಿಯೇ ಚಾಲನೆಗೆ ತರಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT