ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿ, ನೊಂದ ಕ್ಯಾಬ್ ಚಾಲಕ ಆತ್ಮಹತ್ಯೆ

ಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ..

ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಕಾಂತರಾಜು ಮೃತ ದುರ್ದೈವಿ, ಈತ 10 ವರ್ಷಗಳ ಹಿಂದೆ ದೂರದ ಸಂಬಂಧಿ ಭಾಗ್ಯ ಎಂಬಾಕೆಯನ್ನು ವಿವಾಹವಾಗಿದ್ದ. ಈ ದಂಪತಿಗೆ 8 ವರ್ಷದ ಮಗು ಕೂಡ ಇದೆ. 
ಭಾಗ್ಯಳಿಗೆ ಸೋಲೂರಿನ ನಿವಾಸಿ ಕುಮಾರ್ ಎಂಬುವನ ಜೊತೆ ಸಂಬಂಧ ಇತ್ತು. ಇದನ್ನು ತಿಳಿದ ಕಾಂತರಾಜು ಪತ್ನಿಯಿಂದ ದೂರ ಇರುವಂತೆ ಆತನಿಗೆ ಎಚ್ಚರಿಕೆ ನೀಡಿದ್ದ., ಆದರೆ ಕಾಂತರಾಜು ಸಂಬಂಧಿ ಮಂಜ ಮತ್ತು ಆತನ ಪತ್ನಿ ಸುಶೀಲಾ ಕುಮಾರ್ ಗೆ ಬೆಂಬಲ ನೀಡಿದ್ದರು. 
ಇದರಿಂದಾಗಿ ಅವರಿಬ್ಬರು ಪರಾರಿಯಾಗಿದ್ದರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡಿರುವ ಕಾಂತರಾಜು ತನ್ನ ಸಾವಿಗೆ 4 ಜನ ಕಾರಣ ಎಂದು ಹೇಳಿದ್ದಾನೆ.
ಕಾಂತರಾಜು ಪೋಷಕರು ಕುದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಪರಾರಿಯಾದ ಭಾಗ್ಯ ಮತ್ತು ಕುಮಾರ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT