ಸಾಂದರ್ಭಿಕ ಚಿತ್ರ 
ರಾಜ್ಯ

ಲಂಚ ಸ್ವೀಕಾರ: ಹುಬ್ಬಳ್ಳಿಯ ಉಪನ್ಯಾಸಕನಿಗೆ ಕಡ್ಡಾಯ ನಿವೃತ್ತಿ

ವಿದ್ಯಾರ್ಥಿಯೊಬ್ಬರಿಂದ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಉಪನ್ಯಾಸಕರೊಬ್ಬರನ್ನು ಕಡ್ಡಾಯ ನಿವೃತ್ತಿ ಮೇರೆಗೆ ಮನೆಗೆ ಕಳುಹಿಸಲಾಗಿದೆ. ಉಪನ್ಯಾಸಕ ಇರ್ಷಾದ್ ಅಹಮ್ಮದ್ ಶಂಸುದ್ದೀನ್ ಪೀರ್ ಜಾದೆ ಅವರನ್ನು ರಾಜ್ಯಸರ್ಕಾರದ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲಾಗಿದೆ.

ಬೆಂಗಳೂರು: ವಿದ್ಯಾರ್ಥಿಯೊಬ್ಬರಿಂದ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಉಪನ್ಯಾಸಕರೊಬ್ಬರನ್ನು ಕಡ್ಡಾಯ ನಿವೃತ್ತಿ ಮೇರೆಗೆ ಮನೆಗೆ ಕಳುಹಿಸಲಾಗಿದೆ. ಉಪನ್ಯಾಸಕ ಇರ್ಷಾದ್ ಅಹಮ್ಮದ್ ಶಂಸುದ್ದೀನ್ ಪೀರ್ ಜಾದೆ ಅವರನ್ನು ರಾಜ್ಯಸರ್ಕಾರದ  ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲಾಗಿದೆ. 
ಹುಬ್ಬಳ್ಳಿಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್  ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಉಪನ್ಯಾಸಕರಾಗಿದ್ದ ಪೀರ್ ಜಾದೆ, ಪಾಸ್ ಆಗಲು ಪ್ರಾಯೋಗಿಕ ಅಂಕ ನೀಡುವುದಾಗಿ ವಿದ್ಯಾರ್ಥಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿ ಬಿದಿದ್ದರು. 
ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿ ವಿಜಯಕಾಂತ ರಾಮಕೃಷ್ಣ ನಾಯಕ್ ಎಂಬವರಿಂದ 6 ಸಾವಿರ ರೂಪಾಯಿ ಲಂಚ ಪಡೆದಿರುವುದು ದೃಢಪಟ್ಟಿದೆ ಎಂದು ಉಪ ಲೋಕಾಯುಕ್ತರು ಸಲ್ಲಿಸಿದ್ದ ವರದಿ ಆಧಾರದ ಮೇಲೆ ಪ್ರಕರಣ ನಡೆದು 12 ವರ್ಷಗಳ ನಂತರ  ಪೀರ್ ಜಾದೆ ಅವರಿಗೆ ಕಡ್ಡಾಯ ನಿವೃತ್ತಿ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಮಧ್ಯಂತರ ಆದೇಶವನ್ನು ಹೊರಡಿಸಿದೆ. 
ಪ್ರಾಥಮಿಕ ತನಿಖೆಯಲ್ಲೂ ಲಂಚ ಸ್ವೀಕಾರ ದೃಢಪಟ್ಟಿತ್ತು. ಪೀರ್ ಜಾದೆ  ಅವರನ್ನು ಸೇವೆಯಿಂದ ಕಡ್ಡಾಯ ನಿವೃತ್ತಗೊಳಿಸಬೇಕೆಂದು ಉಪ ಲೋಕಾಯುಕ್ತರು ವರದಿ ನೀಡಿದ್ದರು. ಆದ್ದರಿಂದ ಸರ್ಕಾರ ಶೋಕಾಷ್ ನೋಟಿಸ್ ಜಾರಿ ಮಾಡಿದೆ. 
ಲಂಚಕ್ಕಾಗಿ ಒತ್ತಾಯ ಹಾಗೂ ಸ್ವೀಕಾರ ಸಾಬೀತಾಗಿದ್ದು, ರಾಜ್ಯ ನಾಗರಿಕ ಸೇವಾ ನಿಯಮಗಳು 1957ರ ವಿನಾಯಿತಿಯಂತೆ  ಪೀರ್ ಜಾದೆ ಅವರಿಗೆ ಕಡ್ಡಾಯ ನಿವೃತ್ತಿಗೊಳಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT