ರಾಜ್ಯ

ಮೊಬೈಲ್‍ ಗೋಪುರದಿಂದ ಜಿಗಿದು ಯುವಕ ಆತ್ಮಹತ್ಯೆ

Vishwanath S
ಕೆ.ಆರ್.ಪೇಟೆ: ತಾಲ್ಲೂಕಿನ ಸಿಂಧಘಟ್ಟ ಗ್ರಾಮದ ಮೊಬೈಲ್ ಟವರ್‌ನಿಂದ ಹಾರಿ 29 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.
ಮೃತ ಯುವಕನನ್ನು ಮಾಜಿ ಗ್ರಾಮ ಪಂಚಾಯತ್ ಸದಸ್ಯರ ಪುತ್ರ ವಿಜಯ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. 
ಮೊಬೈಲ್‍ ಗೋಪುರದಿಂದ ಹಾರಿ ಕೆಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಜಯ ಕುಮಾರ್ ನನ್ನು ಗಮನಸಿದ ಗ್ರಾಮಸ್ಥರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಯುವಕ ಆಗಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಎಂದು ಘೋಷಿಸಿದ್ದಾರೆ.
ಈ ಕುರಿತಂತೆ ಕೆ.ಆರ್.ಪೇಟೆ ಪೊಲೀಸರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
SCROLL FOR NEXT