ನಾಗರಾಜ್ ರೇವಣಕರ್ 
ರಾಜ್ಯ

ಚಿನ್ನದಲ್ಲಿ ಮಿನಿ ವಿಶ್ವಕಪ್ ಟ್ರೋಫಿ ನಿರ್ಮಿಸಿದ ಬೆಂಗಳೂರಿನ ಅಕ್ಕಸಾಲಿಗ

ಸದ್ಯ ದೇಶಾದ್ಯಂತ ವಿಶ್ವಕಪ್ ಕ್ರಿಕೆಟ್ ಜ್ವರ ಆವರಿಸಿದ್ದು, ಟೀಂ ಇಂಡಿಯಾ ಈ ಬಾರಿ ವಿಶ್ವಕಪ್ ಗೆದ್ದು ಬರಲಿ ಎಂಬ ಆಶಯದೊಂದಿಗೆ ಬೆಂಗಳೂರಿನ ಯುವ...

ಬೆಂಗಳೂರು: ಸದ್ಯ ದೇಶಾದ್ಯಂತ ವಿಶ್ವಕಪ್ ಕ್ರಿಕೆಟ್ ಜ್ವರ ಆವರಿಸಿದ್ದು, ಟೀಂ ಇಂಡಿಯಾ ಈ ಬಾರಿ ವಿಶ್ವಕಪ್ ಗೆದ್ದು ಬರಲಿ ಎಂಬ ಆಶಯದೊಂದಿಗೆ ಬೆಂಗಳೂರಿನ ಯುವ ಅಕ್ಕಸಾಲಿಗರೊಬ್ಬರು ಚಿನ್ನದಲ್ಲಿ ಆಕರ್ಷಕವಾದ ಮಿನಿ ವಿಶ್ವಕಪ್ ಟ್ರೋಫಿ ತಯಾರಿಸಿದ್ದಾರೆ.
ನಿನ್ನೆಯಷ್ಟೇ ಭಾರತ, ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮಿ ಫೈನಲ್ ಪ್ರವೇಶಿಸಿದ್ದು, ಇದೇ ಖುಷಿಯಲ್ಲಿ ನಗರದ ಅಕ್ಕಸಾಲಿಗ ನಾಗರಾಜ್ ರೇವಣಕರ್ ಅವರು 0.490 ಮಿಲಿ ಗ್ರಾಂ ಶುದ್ಧ ಚಿನ್ನದಲ್ಲಿ ಮಿನಿ ವಿಶ್ವಕಪ್ ಟ್ರೋಫಿ ನಿರ್ಮಿಸಿದ್ದಾರೆ. 
1.5 ಸೆಂಟಿ ಮೀಟರ್ ಎತ್ತರದ ಈ ಪುಟ್ಟ ಕಪ್ ತಯಾರಿಸಿರುವ ನಾಗರಾಜ್ ಅವರು ದೊಡ್ಡ ಕ್ರಿಕೆಟ್ ಅಭಿಮಾನಿಯಾಗಿದ್ದು, ಈ ಬಾರಿ ಭಾರತ ವಿಶ್ವಕಪ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ.
ಭಾರತ ತಂಡ ವಿಶ್ವಕಪ್ ಗೆದ್ದರೆ ಈ ಚಿನ್ನದ ಕಪ್ ಅನ್ನು ಕಾಣಿಕೆಯಾಗಿ ನೀಡಬೇಡು ಎಂದುಕೊಂಡಿದ್ದೇನೆ. ಆದರೆ ಹೇಗೆ ತಲುಪಿಸುವುದು ಎಂಬುದು ಗೊತ್ತಿಲ್ಲ. ಒಂದು ವೇಳೆ ಟೀಂ ಇಂಡಿಯಾ ಈ ಮಿನಿ ಕಪ್ ತಲುಪಿಸಲು ಸಾಧ್ಯವಾಗದಿದ್ದರೆ ಅದನ್ನು ನನ್ನ ಬಳಿಯೇ ಇಟ್ಟುಕೊಳ್ಳುತ್ತೇನೆ. ಈ ಪುಟ್ಟ ವಿಶ್ವಕಪ್ ಟ್ರೋಫಿಯನ್ನು ನೋಡಲು ಹಲವು ಜನ ನಮ್ಮ ಅಂಗಡಿಗೆ ಬರುತ್ತಿದ್ದಾರೆ ಎಂದು ನಾಗರಾಜ್ ರೇವಣಕರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT