ಮಹಿಳಾ ಪ್ರಯಾಣಿಕರೊಂದಿಗೆ ಶಕ್ತಿ ಸದಸ್ಯರು 
ರಾಜ್ಯ

ಬೆಂಗಳೂರು- ಮೈಸೂರು ಮಾರ್ಗದ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ

ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸುವ ಆರು ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ರೈಲ್ವೆ ಸುರಕ್ಷತಾ ಪಡೆ ' ಶಕ್ತಿ' ತಂಡವನ್ನು ರಚಿಸಿದೆ.

ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸುವ ಆರು ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ  ನಿಟ್ಟಿನಲ್ಲಿ ರೈಲ್ವೆ ಸುರಕ್ಷತಾ ಪಡೆ  ' ಶಕ್ತಿ' ತಂಡವನ್ನು ರಚಿಸಿದೆ. 
ರೈಲ್ವೆ ಸುರಕ್ಷತಾ ಪಡೆಯ 15 ಕಾನ್ಸ್ ಟೇಬಲ್  ಹಾಗೂ ಮುಖ್ಯ ಕಾನ್ಸ್ ಟೇಬಲ್ ಗಳನ್ನೊಳಗೊಂಡ ಈ ವಿಶೇಷ ತಂಡದಲ್ಲಿ ಎಲ್ಲರೂ ಮಹಿಳೆಯರೇ  ಆಗಿದ್ದಾರೆ.ಶಕ್ತಿ ಸದಸ್ಯರು ಹಾಗೂ ಮಹಿಳಾ ಪ್ರಯಾಣಿಕರ ನಡುವೆ ವಾಟ್ಸಾಪ್ ಗ್ರೂಪ್ ಸೃಷ್ಟಿಸಲಾಗಿದೆ.ಕಡಿಮೆ ಅಂತರದ  ಮಾರ್ಗದ  ರೈಲುಗಳಲ್ಲಿ ಮಹಿಳಾ ಬೋಗಿಗಳಿಗೆ ಇವರು ಸಂಚರಿಸಲಿದ್ದು, ಅನಧಿಕೃತ್ಯ ವ್ಯಕ್ತಿಗಳು ಬೋಗಿಗೆ ಪ್ರವೇಶಿಸದಂತೆ ಮಾಡಲಾಗುತ್ತಿದೆ. 
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಆರ್ ಪಿಎಫ್ ಬೆಂಗಳೂರು ವಿಭಾಗದ ಹಿರಿಯ ವಿಭಾಗೀಯ ಸುರಕ್ಷತಾ ಆಯುಕ್ತೆ ದೆಬಾಸ್ಮಿತಾ ಚಟ್ಟೋಪಾಧ್ಯಾಯ ಬ್ಯಾನರ್ಜಿ,ಬೆಂಗಳೂರು- ಮೈಸೂರು ಮಾರ್ಗದಲ್ಲಿ ಅಸಂಖ್ಯಾತ ಮಹಿಳೆಯರು ಪ್ರಯಾಣಿಸುವ ಹಿನ್ನೆಲೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ.ಮುಂದಿನ ದಿನಗಳಲ್ಲಿ ಬೆಂಗಳೂರು ಹಾಗೂ ಬಂಗಾರಪೇಟೆ ನಡುವೆ ಇಂತಹ ವಿಶೇಷ ಭದ್ರತೆಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಟಿಪ್ಪು, ಚಾಮುಂಡಿ, ವಿಶ್ವಮಾನವ ಎಕ್ಸ್ ಪ್ರೆಸ್  ಸೇರಿದಂತೆ ಮತ್ತಿತರ ರೈಲುಗಳಲ್ಲಿ ಈ ಭದ್ರತಾ ವ್ಯವಸ್ಥೆ ಒದಗಿಸಲಾಗಿದೆ. ಕೆಂಗೇರಿ ಬಳಿ  ಮಹಿಳಾ ಬೋಗಿಗೆ ಆಗಮಿಸಿದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಮಹಿಳಾ ಪ್ರಯಾಣಿಕರು ಸಂಕಷ್ಟದ ಸಂದರ್ಭದಲ್ಲಿ  ಕೇವಲ ಒಂದು ಸಂದೇಶ ಕಳುಹಿಸಿದರೆ ಸಾಕು ನಾವು ಅಲ್ಲಿಗೆ ಬರುತ್ತೇವೆ ಎಂದು ಅವರು ಹೇಳಿದರು.
ರೈಲ್ವೆ ಸುರಕ್ಷತಾ ಪಡೆಯ ಈ ಕಾರ್ಯಕ್ಕೆ ಪ್ರಯಾಣಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮಹಿಳಾ ಬೋಗಿಗಳಿಂದ ಪುರುಷರನ್ನು ಹೊರಗೆ ಕಳುಹಿಸುವಾಗ ಮಹಿಳಾ ಪೊಲೀಸರ ಮನಸ್ಸಿನ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಮುಂಬೈಯಲ್ಲೂ ಇಂತಹ ಹೆಜ್ಜೆ ಕೈಗೊಳ್ಳಲಾಗಿದೆ ಎಂದು ಬ್ಯಾನರ್ಜಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT