ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಸಿಎಂ ಅಮೆರಿಕ ಪ್ರವಾಸ: ಕರ್ನಾಟಕದಲ್ಲಿ ಹೂಡಿಕೆಗೆ ಕುಮಾರಸ್ವಾಮಿ ಆಹ್ವಾನ

ಭಾರತದಲ್ಲಿ ಹೂಡಿಕೆದಾರರನ್ನು ಆಕರ್ಷಿಸುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮೊದಲನೇಯದಾಗಿದ್ದು, ಉದ್ಯಮ ಸ್ಥಾಪನೆಗೆ ಉತ್ತಮ ಅವಕಾಶವಿದೆ. ಜಾಗತಿಕ ಸಮುದಾಯ ಇದನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಭಾರತದಲ್ಲಿ ಹೂಡಿಕೆದಾರರನ್ನು ಆಕರ್ಷಿಸುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮೊದಲನೇಯದಾಗಿದ್ದು, ಉದ್ಯಮ ಸ್ಥಾಪನೆಗೆ ಉತ್ತಮ ಅವಕಾಶವಿದೆ. ಜಾಗತಿಕ ಸಮುದಾಯ ಇದನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅಮೆರಿಕದ ಪ್ರವಾಸದಲ್ಲಿರುವ ಅವರ ವಾಷಿಂಗ್ಟನ್ ಡಿಸಿ ಸಮೀಪ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿ,ಇತ್ತೀಚಿಗೆ ಬೆಂಗಳೂರು ಡೈನಾಮಿಕ್ ಸಿಟಿ ಎಂಬ ಜಾಗತಿಕ ಮನ್ನಣೆಗೆ ಪಾತ್ರವಾಗಿದೆ. ಉದ್ಯಮ ಸ್ನೇಹಿ ಕೈಗಾರಿಕಾ ನೀತಿ, ಮೂಲಸೌಕರ್ಯ ಅಭಿವೃದ್ಧಿ, ಕೌಶಲ್ಯಾಭರಿತ ಮಾನವ ಸಂಪನ್ಮೂಲ ಹಾಗೂ ನೈಸರ್ಗಿಕ ಅನ್ವೇಷಣೆಯಿಂದಾಗಿ ಕರ್ನಾಟಕ ಅಭಿವೃದ್ಧಿಯಾಗಿರುವುದಾಗಿ ತಿಳಿಸಿದರು.
ದೇಶದಲ್ಲಿ ಜೆಡಿಪಿ  ಪ್ರಗತಿ ಶೇ, 7.2 ರಷ್ಟಿದ್ದರೆ, ಕರ್ನಾಟಕದಲ್ಲಿ ಶೇ, 10 ರಷ್ಟಿದೆ. ರಾಜ್ಯದಲ್ಲಿ ಕೌಶಲಾಭಿವೃದ್ಧಿಗೂ ವಿಪುಲ ಅವಕಾಶವಿದೆ. ಭಾರತದ ಒಟ್ಟು ಯಂತ್ರ ಬಿಡಿಭಾಗಗಳ ಉತ್ಪಾದನೆಯಲ್ಲಿ ರಾಜ್ಯದ ಪಾಲು ಶೇ, 60 ರಷ್ಟಿದೆ. ಐಟಿ ರಪ್ತು ಶೇ. 39 ರಷ್ಟಿದೆ. ಶೇ. 33 ರಷ್ಟು ಬಯೊಟೆಕ್ ರಪ್ತು ಇದೆ. ಮೂಲಸೌಲಭ್ಯ ಅಭಿವೃದ್ಧಿಗೂ ವಿಶೇಷ ಗಮನ ಹರಿಸಲಾಗಿದೆ. ರಾಜ್ಯದಲ್ಲಿ 9 ಕಡೆ ಉತ್ಪದನಾ ಉದ್ದೇಶಿತ ಕ್ಲಸ್ಟರ್ ಗಳನ್ನು ರಚಿಸಲಾಗಿದೆ ಎಂದರು.
ಹೂಡಿಕೆದಾರರ ಆಕರ್ಷಿಸಲು , ಉದ್ಯೋಗ ಸೃಷ್ಟಿ ಹಿನ್ನೆಲೆಯಲ್ಲಿ ಮುಂದಿನ ವರ್ಷ ಜನವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗುವುದು. ನೀವು ಪಾಲ್ಗೊಳ್ಳುವ ಮೂಲಕ ಅದನ್ನು ಯಶಸ್ವಿಗೊಳಿಸಬೇಕೆಂದು ಮುಖ್ಯಮಂತ್ರಿ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT