ಸಂಗ್ರಹ ಚಿತ್ರ 
ರಾಜ್ಯ

ಆರ್. ಅಶೋಕ್ ಹೆಸರು ಬಳಸಿ ಸಾಮಾಜಿಕ ತಾಣದಲ್ಲಿ ನಕಲಿ ಪೋಸ್ಟ್: ಇಬ್ಬರ ವಿರುದ್ಧ ಎಫ್ಐಆರ್

ಬಿಜೆಪಿ ನಾಯಕ ಆರ್ ಅಶೋಕ್ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಮಾದ್ಯಮಗಳಲ್ಲಿ ನಕಲಿ ಸಂದೇಶಗಳನ್ನು ಪೋಸ್ಟ್ ಮಾಡಿದ....

ಬೆಂಗಳೂರು: ಬಿಜೆಪಿ ನಾಯಕ ಆರ್ ಅಶೋಕ್ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಮಾದ್ಯಮಗಳಲ್ಲಿ ನಕಲಿ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಬೆಂಗಳೂರು ಬಸವೇಶ್ವರ ನಗರ ಪೋಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಜೆಪಿ ನಾಯಕನ ಅನುಯಾಯಿ ಕೋದಂಡರಾಮ್ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಆರ್. ಅಶೋಕ್ ಮುಖ್ಯಂತ್ರಿ ಎಚ್.ಡಿ. ಕುಮಾರಸ್ವಾಮಿ ಅಮೆರಿಕಾ ಪ್ರವಾಸ, ಆದಿಚುಂಚನಗಿರಿ ಮಠದ ಹಾಗೂ ಅಮೆರಿಕಾದಲ್ಲಿ ನಿರ್ಮಾಣಗೊಳ್ಳುವ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ನಿರ್ಮಾಣದ ವಿರುದ್ಧ ಮಾತನಾಡಿರುವಂತೆ ನಕಲಿ ಹೇಳಿಕೆಗಳನ್ನು ಸೃಷ್ಟಿಸಿ ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದರೆಂಬ ಆರೋಪ ಕೇಳಿಬಂದಿದೆ.
ಒಕ್ಕಲಿಗ ಸಮುದಾಯದ ವಾಟ್ಸ್ ಅಪ್ ಗ್ರೂಪ್ ನಲ್ಲಿ  ಪ್ರಸಾರವಾದ ಪೋಸ್ಟ್‌ಗಳಲ್ಲಿ, ಅಶೋಕ್ ಮಠದ ವಿರುದ್ಧ ಹೇಳಿಕೆ  ನೀಡಿದ್ದಾಗಿ ಪ್ರಸಾರವಾಗಿದೆ.
ಇದೀಗ ಪೋಲೀಸರು ದೂರಿನ ಹಿನ್ನೆಲೆ  ಐಪಿಸಿ ಸೆಕ್ಷನ್ 295 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT