ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನ 
ರಾಜ್ಯ

ಚಾಮುಂಡಿ ಬೆಟ್ಟಡಲ್ಲಿ ಆಷಾಢ ಪೂಜೆ: ಪ್ರಸಾದ ವಿತರಿಸಲು ಅನುಮತಿ ನಿಯಮ ಹೇರಿದ ಮೈಸೂರು ಜಿಲ್ಲಾಡಳಿತ

ಚಾಮರಾಜನಗರ ಜಿಲ್ಲೆಯ ಸುಳವಾಡಿ ದೇವಸ್ಥಾನದ ಪ್ರಸಾದ ಸೇವಿಸಿ 17 ಭಕ್ತರು ಮೃತಪಟ್ಟ ಘಟನೆ ನಂತರ ಮೈಸೂರು ....

ಮೈಸೂರು: ಚಾಮರಾಜನಗರ ಜಿಲ್ಲೆಯ ಸುಳವಾಡಿ ದೇವಸ್ಥಾನದ ಪ್ರಸಾದ ಸೇವಿಸಿ 17 ಭಕ್ತರು ಮೃತಪಟ್ಟ ಘಟನೆ ನಂತರ ಮೈಸೂರು ಜಿಲ್ಲಾಡಳಿತ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಚಾಮುಂಡಿ ಬೆಟ್ಟದಲ್ಲಿ ಇದೇ ಶುಕ್ರವಾರ ಆಷಾಢ ಮಾಸದ ಮೊದಲ ಪೂಜೆ ನಡೆಯಲಿದ್ದು  ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಹಂಚುವ ಪ್ರಸಾದದ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಿದೆ.
ಚಾಮುಂಡಿ ಬೆಟ್ಟದ ನಿಗದಿತ ಪ್ರದೇಶಗಳಲ್ಲಿ ಪ್ರಸಾದ ವಿತರಿಸಲು ಬಳಸುವ ವಾಹನಗಳು ಕಡ್ಡಾಯವಾಗಿ ಪಾಸ್ ಪಡೆದಿರಬೇಕು. ಅಲ್ಲದೆ ಪ್ರಸಾದ ವಿತರಿಸಲು ಇಚ್ಛಿಸುವ ಭಕ್ತಾದಿಗಳು ಕಡ್ಡಾಯವಾಗಿ ಜಿಲ್ಲಾಡಳಿತದಿಂದ ಅನುಮತಿ ಪಡೆದಿರಬೇಕು. ಚಾಮುಂಡೇಶ್ವರ ಬೆಟ್ಟದ ತುದಿಯಲ್ಲಿ ಆಷಾಢ ಶುಕ್ರವಾರ ಪೂಜಾ ಮಹೋತ್ಸವ ಜುಲೈ 5ರಿಂದ ಜುಲೈ 26ರವರೆಗೆ ನೆರವೇರಲಿದೆ.
ಈ ಮಧ್ಯೆ ಮುಖ್ಯ ದೇವತೆಯ ವರ್ಧಂತಿ ಉತ್ಸವ ಇದೇ 24ರಂದು ನೆರವೇರಲಿದೆ. ಬೆಟ್ಟದ ತುದಿಗೆ ಪ್ರಸಾದ ಸಾಗಿಸುವ ವಾಹನಗಳಿಗೆ ಪಾಸ್ ವಿತರಣೆ ಮಾಡಲಾಗುತ್ತದೆ. ನಿಗದಿತ ಸಮಯದಲ್ಲಿ ಮಾತ್ರ ಭಕ್ತರಿಗೆ ಪ್ರಸಾದ ವಿತರಣೆ ಮಾಡಬೇಕಾಗಿದ್ದು ಮೊದಲು ಮತ್ತು ತಡವಾಗಿ ಬರುವವರನ್ನು ಒಳಗೆ ಬಿಡುವುದಿಲ್ಲ. ಇದಕ್ಕೂ ಮುನ್ನ ಫುಡ್ ಇನ್ಸ್ ಪೆಕ್ಟರ್ ಆಹಾರವನ್ನು ತಪಾಸಣೆ ನಡೆಸಿದ ಬಳಿಕವಷ್ಟೆ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ವಿತರಿಸಲು ಅವಕಾಶ ನೀಡಲಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಕೆ ಟಿ ಬಾಲಕೃಷ್ಣ, ಜುಲೈ 4ರಿಂದ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುತ್ತೇವೆ. ಅವರು ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುತ್ತಾರೆ. ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದ್ದು ಅವರಲ್ಲಿ 806 ಕಾನ್ಸ್ಟೇಬಲ್ ಗಳು, 174 ಹೋಮ್ ಗಾರ್ಡ್ಸ್, 160 ಮಹಿಳಾ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!