ನಿತ್ಯಾನಂದ ಸ್ವಾಮಿ 
ರಾಜ್ಯ

ಇದಪ್ಪಾ ವರಸೆ! ನಾನು ಹೇಳಿದ್ದರಿಂದಲೇ ಸೂರ್ಯ 40 ನಿಮಿಷ ತಡವಾಗಿ ಉದಯಸಿದ; ಬುರುಡೆ ಬಿಟ್ಟ ನಿತ್ಯಾನಂದಸ್ವಾಮಿ

ನಾನು ಹೇಳಿದ್ದರಿಂದಲೇ ಸೂರ್ಯ ಇಂದು 40 ನಿಮಿಷ ತಡವಾಗಿ ಉದಯಿಸಿದ್ದಾನೆ, ಸೂರ್ಯ ನನ್ನ ಮಾತಿನಂತೆ ನಡೆದುಕೊಳ್ಳುತ್ತಾನೆ ಎಂದು ಬಿಡದಿಯ ನಿತ್ಯಾನಂದ ಸ್ವಾಮಿ ...

ಬಿಡದಿ: ನಾನು ಹೇಳಿದ್ದರಿಂದಲೇ ಸೂರ್ಯ ಇಂದು 40 ನಿಮಿಷ ತಡವಾಗಿ ಉದಯಿಸಿದ್ದಾನೆ, ಸೂರ್ಯ ನನ್ನ ಮಾತಿನಂತೆ ನಡೆದುಕೊಳ್ಳುತ್ತಾನೆ ಎಂದು ಬಿಡದಿಯ ನಿತ್ಯಾನಂದ ಸ್ವಾಮಿ ತನ್ನ ಅನುಯಾಯಿಗಳ ಮುಂದೆ ಬುರುಡೆ ಬಿಟ್ಟಿದ್ದಾನೆ.
ಬಿಡದಿಯ ತನ್ನ ಆಶ್ರಮದಲ್ಲಿ ಅನುಯಾಯಿಗಳಿಗೆ ಇತ್ತೀಚೆಗೆ ಪ್ರವಚನ ನೀಡುವಾಗ ಬೆಳಗ್ಗೆ ಧ್ವಜಾರೋಹಣ 6.40 ರಿಂದ 7 ಗಂಟೆಯೊಳಗೆ ಮುಗಿಯಬೇಕು. ಆದರೆ, ಇಂದು ನಾನು ಧ್ವಜಾರೋಹಣಕ್ಕೆ ಬರುವುದು ಸ್ವಲ್ಪ ತಡವಾಯಿತು. ಹಾಗಾಗಿ ನಾನು ದ್ವಜಾರೋಹಣ ಮುಗಿಸುವವರೆಗೂ ಉದಯಿಸದಂತೆ ಸೂರ್ಯನಿಗೆ ತಿಳಿಸಿದ್ದೆ. ಅದರಂತೆ ಇಂದು ಸೂರ್ಯ 40 ನಿಮಿಷ ತಡವಾಗಿ ಉದಯಿಸಿದ್ದಾನೆ.ನನಗೆ ಸೂರ್ಯನನ್ನು ಕಂಟ್ರೋಲ್ ಮಾಡುವ ಸಾಮರ್ಥ್ಯ ನನಗಿದೆ ಎಂದು ಹೇಳಿಕೊಂಡಿದ್ದಾನೆ.
ನನ್ನ ಮಾತಿನ ಮೇಲೆ ನಂಬಿಕೆ ಇಲ್ಲದಿದ್ದರೆ ಗೂಗಲ್​ನಲ್ಲಿ ಇಂದು ಬಿಡದಿಯಲ್ಲಿ ಸೂರ್ಯೋದಯವಾಗಬೇಕಿದ್ದ ಸಮಯ ಮತ್ತು ಸೂರ್ಯೋದಯವಾದ ಸಮಯವನ್ನು ಪರೀಕ್ಷಿಸಿ. ನಾನು ಧ್ವಜಾರೋಹಣ ಮುಗಿಸಿ ಹೊರಬಂದಾಗ ಸೂರ್ಯ ಪೂರ್ವದಲ್ಲಿ ಉದಯಿಸುತ್ತಿದ್ದ. ಮೋಡಗಳಿಂದಾಗಿ ಸೂರ್ಯೋದಯ ತಡವಾಗಲಿಲ್ಲ ಎಂಬುದನ್ನು ನೀವು ಗಮನಿಸಬಹುದು ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾನೆ.ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!