ರಾಜ್ಯ

ಐಎಂಎ ಹಗರಣ: ಉಪವಿಭಾಗಾಧಿಕಾರಿ ಎಲ್.ಸಿ.ನಾಗರಜ್ ಬಂಧನ

ಐಎಂಎ ಸಮೂಹ ಕಂಪನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಉತ್ತರ ಉಪವಿಭಾಗಾಧಿಕಾರಿ ...

ಬೆಂಗಳೂರು: ಐಎಂಎ ಸಮೂಹ ಕಂಪನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಐಎಂಎ ಸಮೂಹ ಕಂಪನಿ ವಿರುದ್ಧ ನಿಯಮಬಾಹಿರ ವಹಿವಾಟಿನ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಆ ಸಂಬಂಧ ತನಿಖೆ ನಡೆಸುವಂತೆ ಆರ್ ಬಿ ಐ ಈ ಹಿಂದೆಯೇ ಸೂಚನೆ ನೀಡಿತ್ತು. ಅದರಂತೆ, ಸರ್ಕಾರ ತನಿಖೆಯ ಜವಾಬ್ದಾರಿಯನ್ನು ಉಪವಿಭಾಗಾಧಿಕಾರಿ ಎಲ್. ಸಿ. ನಾಗರಾಜ್ ಅವರಿಗೆ ವಹಿಸಿತ್ತು. ಆದರೆ, ಅವರು ಐಎಂಎ ಮಾಲೀಕರಿಂದ 4.5 ಕೋಟಿ ರೂ. ಹಣ ಪಡೆದು ಐಎಂಎ ಪರವಾಗಿ ವರದಿ ನೀಡಿದ್ದರು.
ಈಗ ಐಎಂಎ ಹಗರಣ ಬೆಳಕಿಗೆ ಬಂದ ನಂತರ ತನಿಖೆ ಆರಂಭಿಸಿದ ಎಸ್ ಐ ಟಿ ಅಧಿಕಾರಿಗಳು, ನಾಗರಾಜ್ ಅವರನ್ನು ಗುರುವಾರ ವಿಚಾರಣೆಗೊಳಪಡಿಸಿದ್ದರು. ಆಗ ಹಳೆಯ ಲಂಚ ಪ್ರಕರಣದ ಪುರಾವೆಗಳು ದೊರೆತಿವೆ. ಆದ್ದರಿಂದ ಅವರನ್ನು ಬಂಧಿಸಿದ್ದು, ಸದ್ಯದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್ ಐ ಟಿ ಅಧಿಕಾರಿಗಳೊಬ್ಬರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT