ರಾಜ್ಯ

ಐಎಂಎ ಹಗರಣ: ಉಪವಿಭಾಗಾಧಿಕಾರಿ ಎಲ್.ಸಿ.ನಾಗರಜ್ ಬಂಧನ

ಐಎಂಎ ಸಮೂಹ ಕಂಪನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಉತ್ತರ ಉಪವಿಭಾಗಾಧಿಕಾರಿ ...

ಬೆಂಗಳೂರು: ಐಎಂಎ ಸಮೂಹ ಕಂಪನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಐಎಂಎ ಸಮೂಹ ಕಂಪನಿ ವಿರುದ್ಧ ನಿಯಮಬಾಹಿರ ವಹಿವಾಟಿನ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಆ ಸಂಬಂಧ ತನಿಖೆ ನಡೆಸುವಂತೆ ಆರ್ ಬಿ ಐ ಈ ಹಿಂದೆಯೇ ಸೂಚನೆ ನೀಡಿತ್ತು. ಅದರಂತೆ, ಸರ್ಕಾರ ತನಿಖೆಯ ಜವಾಬ್ದಾರಿಯನ್ನು ಉಪವಿಭಾಗಾಧಿಕಾರಿ ಎಲ್. ಸಿ. ನಾಗರಾಜ್ ಅವರಿಗೆ ವಹಿಸಿತ್ತು. ಆದರೆ, ಅವರು ಐಎಂಎ ಮಾಲೀಕರಿಂದ 4.5 ಕೋಟಿ ರೂ. ಹಣ ಪಡೆದು ಐಎಂಎ ಪರವಾಗಿ ವರದಿ ನೀಡಿದ್ದರು.
ಈಗ ಐಎಂಎ ಹಗರಣ ಬೆಳಕಿಗೆ ಬಂದ ನಂತರ ತನಿಖೆ ಆರಂಭಿಸಿದ ಎಸ್ ಐ ಟಿ ಅಧಿಕಾರಿಗಳು, ನಾಗರಾಜ್ ಅವರನ್ನು ಗುರುವಾರ ವಿಚಾರಣೆಗೊಳಪಡಿಸಿದ್ದರು. ಆಗ ಹಳೆಯ ಲಂಚ ಪ್ರಕರಣದ ಪುರಾವೆಗಳು ದೊರೆತಿವೆ. ಆದ್ದರಿಂದ ಅವರನ್ನು ಬಂಧಿಸಿದ್ದು, ಸದ್ಯದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್ ಐ ಟಿ ಅಧಿಕಾರಿಗಳೊಬ್ಬರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT