ರಾಜ್ಯ

ಚಿಕ್ಕಮಗಳೂರು: ಬಂಡೆಕಲ್ಲಿನಿಂದ ಜಾರಿ ಬಿದ್ದು ಆನೆ ಸಾವು

ಇಲ್ಲಿನ ಗುಡ್ಡೆತೋಟದ ಸಮೀಪ ಕಾಫಿ ತೋಟದಲ್ಲಿ ಬಂಡೆ ಮೇಲೆ ಕಾಡಾನೆಯೊಂದು ಬಿದ್ದು ಮೃತಪಟ್ಟಿದೆ...

ಚಿಕ್ಕಮಗಳೂರು: ಇಲ್ಲಿನ ಗುಡ್ಡೆತೋಟದ ಸಮೀಪ ಕಾಫಿ ತೋಟದಲ್ಲಿ ಬಂಡೆ ಮೇಲೆ ಕಾಡಾನೆಯೊಂದು ಬಿದ್ದು ಮೃತಪಟ್ಟಿದೆ. 
ಚಿಕ್ಕಮಗಳೂರಿನ ಬಸಾಪುರ ಪ್ರದೇಶದ ಸುತ್ತಮುತ್ತ ಕಳೆದ ಕೆಲ ದಿನಗಳಿಂದ ಮೂರು ಕಾಡಾನೆಗಳು ಕಾಫಿ ತೋಟಕ್ಕೆ ಲಗ್ಗೆಯಿಟ್ಟು ಹಾನಿ ಮಾಡುತ್ತಿದ್ದವು. ಕಾಡಾನೆಗಳ ಹಾವಳಿಯನ್ನು ತಪ್ಪಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಇತ್ತೀಚೆಗೆ ಶೃಂಗೇರಿ ಶಾಸಕ ಟಿ ಡಿ ರಾಜೇ ಗೌಡ ಮನವಿ ಮಾಡಿಕೊಂಡಿದ್ದರು. ಕಾಡಾನೆಗಳನ್ನು ಭಯಪಡಿಸಿ ಎಂಬ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ಮಂಗಳವಾರದಿಂದ ಆರಂಭಿಸಿದ್ದರು.
ಮೊನ್ನೆ ಬುಧವಾರ ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮತ್ತೆ ಕಾಫಿತೋಟ ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಂಡಿದ್ದವು. ಪಟಾಕಿಗಳನ್ನು ಸಿಡಿಸಿ ದೊಡ್ಡ ಶಬ್ದ ಮಾಡಿ ಅವುಗಳನ್ನು ಓಡಿಸಲು ನೋಡಿದ್ದರು, ಪಟಾಕಿ ಶಬ್ದಕ್ಕೆ ಕಾಡಾನೆಗಳು ಭೀತಿಯಿಂದ ಓಡಲು ಆರಂಭಿಸಿದವು. ಹೀಗೆ ಓಡುವಾಗ ಒಂದು ಆನೆ ಒದ್ದೆಯಾದ ಕಲ್ಲಿನ ಬಂಡೆಯಿಂದ ಜಾರಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. 
ಉಳಿದೆರಡು ಆನೆಗಳು ಈ ಪ್ರದೇಶದ ಸುತ್ತಮುತ್ತ ಓಡಾಡುತ್ತಿವೆ. ಉಳಿದೆರಡು ಆನೆಗಳು ದಾಳಿ ನಡೆಸುವ ಸಾಧ್ಯತೆಯಿರುವುದರಿಂದ ಆನೆ ಸತ್ತ ಜಾಗದ ಸುತ್ತಮುತ್ತ ಸುಳಿಯದಂತೆ ಅರಣ್ಯಾಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT