ರಾಜ್ಯ

ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ: ಅಲೋಕ್ ಕುಮಾರ್

Shilpa D
ಬೆಂಗಳೂರು: ಜನರ ಜೊತೆ ಸಂಪರ್ಕದಲ್ಲಿರಲು ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.
ಗುರುವಾರ ಈ ಸಂಬಂಧ ಮೆಮೋ ನೀಡಿರುವ ಆಯುಕ್ತರು, ಎಲ್ಲಾ ಪೋಲೀಸ್ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಸೋಷಿಯಲ್ ಮೀಡಿಯಾವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಸೂಚಿಸಿದ್ದಾರೆ.
ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಸಾಧಿಸಲು ಕೇವಲ ಅಧಿಕಾರಿಗಳು ಮಾತ್ರ ಸಾಮಾಜಿಕ ಮಾಧ್ಯಮ ಬಳಸಿದರೇ ಸಾಲದು, ಎಸಿಪಿ, ಡಿಸಿಪಿಗಳು ಬಳಿಸಿಕೊಳ್ಳಬೇಕು, ಕೆಲವು ಪ್ರಮುಖ ಪ್ರಕರಣಗಳನ್ನು ಅಧಿಕಾರಿಗಳು ಸೋಷಿಯಲ್ ಮೀಡಿಯಾ ಮೂಲಕ ಆಯುಕ್ತರ ಕಚೇರಿಗೆ ರವಾನಿಸುತ್ತಾರೆ, 
ಇದರಿಂದಾಗಿ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ, ಜೊತೆಗೆ ಸಿಎಂ ಹಾಗೂ ಗೃಹ ಸಚಿವರ  ಖಾತೆಯಿಂದ ಬಂದ ದೂರುಗಳ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಆದೇಶಿಸಿದ್ದಾರೆ.
SCROLL FOR NEXT