ಸಾಂದರ್ಭಿಕ ಚಿತ್ರ 
ರಾಜ್ಯ

ಕೃಷ್ಣಾ ನದಿ ಒಳಹರಿವು ಹೆಚ್ಚಳ; 6 ಸೇತುವೆಗಳು ಮುಳುಗಡೆ

ಉತ್ತರ ಕರ್ನಾಟಕ ಜಿಲ್ಲೆಯ ಹಲವು ಕಡೆಗಳಲ್ಲಿ ಬರಗಾಲ ಇರುವಾಗ ಕಳೆದ ಕೆಲ ದಿನಗಳಲ್ಲಿ ಪರಿಸ್ಥಿತಿ ...

ಬೆಳಗಾವಿ: ಉತ್ತರ ಕರ್ನಾಟಕ ಜಿಲ್ಲೆಯ ಹಲವು ಕಡೆಗಳಲ್ಲಿ ಬರಗಾಲ ಇರುವಾಗ ಕಳೆದ ಕೆಲ ದಿನಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಮಹಾರಾಷ್ಟ್ರ ಗಡಿ ಭಾಗದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಭೀತಿ ಎದುರಾಗಿದೆ. 
ಗಡಿ ಪ್ರದೇಶದಲ್ಲಿ ಮತ್ತು ಮಹಾರಾಷ್ಟ್ರದ ಪಾಶ್ಚಾತ್ಯ ಭಾಗದಲ್ಲಿ ಹಲವು ಜಲಾಶಯಗಳು ತುಂಬಿರುವುದರಿಂದ ಉತ್ತರ ಕರ್ನಾಟಕದ ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗಿದೆ. ಕೃಷ್ಣಾ ನದಿಯ ಹಲವು ಉಪನದಿಗಳಲ್ಲಿ ಸಹ ಕಳೆದ ಕೆಲ ದಿನಗಳಿಂದ ಒಳಹರಿವು ಹೆಚ್ಚಾಗಿದೆ.
ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಸಂಪರ್ಕಿಸುವ ಗಡಿ ಭಾಗದ ತಗ್ಗು ಪ್ರದೇಶದಲ್ಲಿರುವ ಕನಿಷ್ಠ 6 ಜಲಾಶಯಗಳು ಕೃಷ್ಣಾ ನದಿ ನೀರು ತುಂಬಿ ಹರಿಯುತ್ತಿರುವುದರಿಂದ ಮುಳುಗಿಹೋಗಿವೆ. ಕೃಷ್ಣಾ ನದಿಗೆ ಮಹಾರಾಷ್ಟ್ರದ ರಾಜಪುರ ಅಣೆಕಟ್ಟಿನಿಂದ ನೀರಿನ ಹರಿವು ಹೆಚ್ಚಾಗಿದ್ದು ಅವ್ಯಾಹತ ಮಳೆಯಿಂದ ಸೇತುವೆಗಳು ಮುಳುಗಿ ಅಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.
ಕೃಷ್ಣಾ ನದಿ ತೀರದಲ್ಲಿ ನೆರೆ ಪ್ರವಾಹದ ಸಾಧ್ಯತೆಯ ನಿಗಾವಹಿಸುತ್ತಿರುವ ತಹಶಿಲ್ದಾರ್ ಸಂತೋಷ್ ಬಿರಾದಾರ್, ನದಿಗೆ ಜನರು ಇಳಿಯದಂತೆ ಅಥವಾ ನೀರಿನೊಳಗೆ ಜಾನುವಾರುಗಳನ್ನು ಇಳಿಸದಂತೆ ಎಚ್ಚರಿಕೆ ನೀಡಿದ್ದಾರೆ. ತೀರ ಭಾಗದಲ್ಲಿ ಪ್ರವಾಹ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಉತ್ತರ ಕರ್ನಾಟಕ ಭಾಗದ ಭೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಜತ್ರಾಟದಲ್ಲಿನ ಜತ್ರಾಟ-ಭಿವಶಿ, ಮಲಿಕವಾಡ-ದತ್ತವಾಡ ಸೇತುವೆಗಳು ಮುಳುಗಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT