ಎಚ್ ಎಸ್ ದೊರೆಸ್ವಾಮಿ, ಸಿ ಚಂದ್ರಶೇಖರ್, ಟಿ ಎನ್ ಕೃಷನ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ 
ರಾಜ್ಯ

ಎಚ್ ಎಸ್ ದೊರೆಸ್ವಾಮಿ, ಸಿ ಚಂದ್ರಶೇಖರ್, ಟಿ ಎನ್ ಕೃಷನ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2018 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಲಲಿತಕಲೆ ಹಾಗೂ ಜಕಣಾಚಾರಿ ಪ್ರಶಸ್ತಿಗಳಿಗೆ ಭಾಜನರಾದ ಸಾಧಕರ ಅನುಮೋದನೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಗುರುವಾರ ಬಿಡುಗಡೆಗೊಳಿಸಿದ್ದಾರೆ.

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2018 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಲಲಿತಕಲೆ ಹಾಗೂ ಜಕಣಾಚಾರಿ ಪ್ರಶಸ್ತಿಗಳಿಗೆ ಭಾಜನರಾದ ಸಾಧಕರ ಅನುಮೋದನೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಗುರುವಾರ ಬಿಡುಗಡೆಗೊಳಿಸಿದ್ದಾರೆ.
ಕರ್ನಾಟಕ ಸಂಗೀತ ವಾದ್ಯ ಕ್ಷೇತ್ರದಲ್ಲಿ ಗಣನೀಯ ಸಲ್ಲಿಸಿದಕ್ಕಾಗಿ ಚೆನ್ನೈನ ಟಿ.ಎನ್.ಕೃಷ್ಣನ್ ಅವರಿಗೆ ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಗಾಂಧಿವಾದಿ ಹಾಗೂ ಹೋರಾಟಗಾರರಾದ ಬೆಂಗಳೂರಿನ ಹೆಚ್.ಎಸ್.ದೊರೆಸ್ವಾಮಿ ಅವರಿಗೆ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ, ಅಹಿಂಸಾತತ್ವ ಪಾಲನೆ ಹಾಗೂ ಸಮಾಜ ಸೇವೆಗಾಗಿ ಹಾವೇರಿಯ ಚನ್ನಮ್ಮ ಹಳ್ಳಿಕೇರಿ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಡಾ.ಗುಬ್ಬಿವೀರಣ್ಣ ಪ್ರಶಸ್ತಿಗೆ ಬಾಗಲಕೋಟೆಯ ಪ್ರಕಾಶ್ ಕಡಪಟ್ಟಿ, ಜಾನಪದ ಶ್ರೀ ಪ್ರಶಸ್ತಿಗೆ ಬೀದರ್ ನ ಚಂದ್ರಶಾ ತಮ್ಮಣ್ಣಪ್ಪ ಮಾಳಗೆ ಹಾಗೂ ಮೈಸೂರಿನ ಹಿಣಕಲ್ ಮಹದೇವಯ್ಯ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಬೆಂಗಳೂರಿನ ಸಿ.ಚಂದ್ರಶೇಖರ್ ಹಾಗೂ ಜಕಣಾಚಾರಿ ಪ್ರಶಸ್ತಿಗೆ ಉಡುಪಿಯ ಲಕ್ಷ್ಮೀನಾರಾಯಣ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT