ಎಚ್ ಎಸ್ ದೊರೆಸ್ವಾಮಿ, ಸಿ ಚಂದ್ರಶೇಖರ್, ಟಿ ಎನ್ ಕೃಷನ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ 
ರಾಜ್ಯ

ಎಚ್ ಎಸ್ ದೊರೆಸ್ವಾಮಿ, ಸಿ ಚಂದ್ರಶೇಖರ್, ಟಿ ಎನ್ ಕೃಷನ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2018 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಲಲಿತಕಲೆ ಹಾಗೂ ಜಕಣಾಚಾರಿ ಪ್ರಶಸ್ತಿಗಳಿಗೆ ಭಾಜನರಾದ ಸಾಧಕರ ಅನುಮೋದನೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಗುರುವಾರ ಬಿಡುಗಡೆಗೊಳಿಸಿದ್ದಾರೆ.

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2018 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಲಲಿತಕಲೆ ಹಾಗೂ ಜಕಣಾಚಾರಿ ಪ್ರಶಸ್ತಿಗಳಿಗೆ ಭಾಜನರಾದ ಸಾಧಕರ ಅನುಮೋದನೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಗುರುವಾರ ಬಿಡುಗಡೆಗೊಳಿಸಿದ್ದಾರೆ.
ಕರ್ನಾಟಕ ಸಂಗೀತ ವಾದ್ಯ ಕ್ಷೇತ್ರದಲ್ಲಿ ಗಣನೀಯ ಸಲ್ಲಿಸಿದಕ್ಕಾಗಿ ಚೆನ್ನೈನ ಟಿ.ಎನ್.ಕೃಷ್ಣನ್ ಅವರಿಗೆ ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಗಾಂಧಿವಾದಿ ಹಾಗೂ ಹೋರಾಟಗಾರರಾದ ಬೆಂಗಳೂರಿನ ಹೆಚ್.ಎಸ್.ದೊರೆಸ್ವಾಮಿ ಅವರಿಗೆ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ, ಅಹಿಂಸಾತತ್ವ ಪಾಲನೆ ಹಾಗೂ ಸಮಾಜ ಸೇವೆಗಾಗಿ ಹಾವೇರಿಯ ಚನ್ನಮ್ಮ ಹಳ್ಳಿಕೇರಿ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಡಾ.ಗುಬ್ಬಿವೀರಣ್ಣ ಪ್ರಶಸ್ತಿಗೆ ಬಾಗಲಕೋಟೆಯ ಪ್ರಕಾಶ್ ಕಡಪಟ್ಟಿ, ಜಾನಪದ ಶ್ರೀ ಪ್ರಶಸ್ತಿಗೆ ಬೀದರ್ ನ ಚಂದ್ರಶಾ ತಮ್ಮಣ್ಣಪ್ಪ ಮಾಳಗೆ ಹಾಗೂ ಮೈಸೂರಿನ ಹಿಣಕಲ್ ಮಹದೇವಯ್ಯ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಬೆಂಗಳೂರಿನ ಸಿ.ಚಂದ್ರಶೇಖರ್ ಹಾಗೂ ಜಕಣಾಚಾರಿ ಪ್ರಶಸ್ತಿಗೆ ಉಡುಪಿಯ ಲಕ್ಷ್ಮೀನಾರಾಯಣ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT