ಕುಂದಾಪುರ: ತಾಯಿ ಜತೆ ಮಲಗಿದ್ದ ಎರಡು ವರ್ಷದ ಮಗು ಅಪಹರಣ 
ರಾಜ್ಯ

ಕುಂದಾಪುರ: ತಾಯಿ ಜತೆ ಮಲಗಿದ್ದ ಎರಡು ವರ್ಷದ ಮಗು ಅಪಹರಣ

ತಾಯಿಯ ಪಕ್ಕದಲ್ಲಿ ಮಲಗಿದ್ದ ಹೆಣ್ಣು ಮಗುವೊಂದನ್ನು ದುಷ್ಕರ್ಮಿಗಳಿಬ್ಬರು ಗುರುವಾರ ಬೆಳ್ಳಂಬೆಳಗ್ಗೆ ಅಪಹರಿಸಿರುವ ಘಟನೆ ಕುಂದಾಪುರ ತಾಲೂಕಿನ ಎಡಮೊಗೆ ಗ್ರಾಮದಲ್ಲಿ ನಡೆದಿದೆ.

ಕುಂದಾಪುರ: ತಾಯಿಯ ಪಕ್ಕದಲ್ಲಿ ಮಲಗಿದ್ದ ಹೆಣ್ಣು ಮಗುವೊಂದನ್ನು ದುಷ್ಕರ್ಮಿಗಳಿಬ್ಬರು ಗುರುವಾರ ಬೆಳ್ಳಂಬೆಳಗ್ಗೆ ಅಪಹರಿಸಿರುವ ಘಟನೆ ಕುಂದಾಪುರ ತಾಲೂಕಿನ ಎಡಮೊಗೆ ಗ್ರಾಮದಲ್ಲಿ ನಡೆದಿದೆ.
ಎಡಮೊಗೆ ಗ್ರಾಮದ ಕುಮ್ಟಿ ಬೇರು ಸಂತೋಷ್ ನಾಯ್ಕ ಎಂಬುವವರ ಎರಡು ವರ್ಷದ ಹೆಣ್ಣು ಮಗುವನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ.
ಸಂತೋಷ್ ನಾಯ್ಕ, ಪತ್ನಿ ಹಾಗೂ ತಮ್ಮ ಎರಡು ಮಕ್ಕಳೊಂದಿಗೆ ನಿದ್ರಿಸುತ್ತಿದ್ದಾಗ. ನಸುಕಿನ ಜಾವ 4 ಗಂಟೆಗೆ ಮನೆಯ ಎಡಬಾಗಿಲಿನಿಂದ ಒಳನುಗ್ಗಿದ ದುಷ್ಕರ್ಮಿಗಳು ಮಗುವನ್ನು ಅಪಹರಿಸಿಕೊಂಡು ಹೋಗುತ್ತಿದ್ದಾಗ, ತಾಯಿ ಎಚ್ಚರಗೊಂಡು, ದುಷ್ಕರ್ಮಿಗಳನ್ನು ಹಿಂಬಾಲಿಸುತ್ತಾ ಬೊಬ್ಬೆ ಹಾಕಿದ್ದಾರೆ. ಆಗ ಅಪಹರಣಕಾರರು ಮಗುವಿನ ಸಮೇತ ತುಂಬಿ ಹರಿಯುತ್ತಿದ್ದ ಕುಬ್ಜಾ ನದಿಗೆ ಹಾರಿದ್ದಾರೆ.ಬಳಿಕ ಈಜುತ್ತಾ ನದಿ ದಾಟಿ ಹೊಸಂಗಡಿಯತ್ತ ಪರಾರಿಯಾಗಿದ್ದಾರೆ.
ಘಟನೆಗೆ ಕಾರಣವಿನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಶಂಕರನಾರಾಯಣ ಪೋಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
ಈ ಮಗುವಿನ ಬಗ್ಗೇ ಮಾಹಿತಿ ಸಿಕ್ಕಿದರೆ 
ಉಡುಪಿ ಪೊಲೀಸ್ ಕಂಟ್ರೋಲ್ 0820 2526444, 0820 2526709 ಹಾಗೆ ಶಂಕರನಾರಾಯಣ ಠಾಣೆ 08259 280299 & 9480805456 ಮಾಹಿತಿ ಕೊಡಿ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT