ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ಮನೆಗೆ ಬಂದ ಮುಸುಕುಧಾರಿ ವ್ಯಕ್ತಿ; ಮಲಗಿದ್ದ ಮಗು ಎತ್ತಿಕೊಂಡು ಪರಾರಿ!

ಮುಸುಕು ಹಾಕಿಕೊಂಡು ಬಂದ ವ್ಯಕ್ತಿಯೊಬ್ಬ ಮನೆಯಲ್ಲಿ ಮಲಗಿದ್ದ 1 ವರ್ಷದ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ...

ಉಡುಪಿ: ಮುಸುಕು ಹಾಕಿಕೊಂಡು ಬಂದ ವ್ಯಕ್ತಿಯೊಬ್ಬ ಮನೆಯಲ್ಲಿ ಮಲಗಿದ್ದ 1 ವರ್ಷದ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಎಡಮೊಗ್ಗೆ ಗ್ರಾಮದ ಕುಮಟಿ ಬೇರು ಎಂಬಲ್ಲಿಂದ ವರದಿಯಾಗಿದೆ.
ಗುರುವಾರ ಬೆಳಗ್ಗೆ ಮನೆಗೆ ನುಗ್ಗಿದ ಆಗಂತುಕ  ಸಾನ್ವಿತಾ ನಾಯಕ್ ಎಂಬ 1 ವರ್ಷದ ಮಗುವನ್ನು ಕಿಡ್ನಾಪ್ ಮಾಡಿಕೊಂಡು ಪರಾರಿಯಾಗಿದ್ದಾನೆ, ಕುಬ್ಜಾ ನದಿಯ ಮೂಲಕ ಮಗುವನ್ನು ಎತ್ತಿಕೊಂಡು ಪರಾರಿಯಾಗಿದ್ದಾನೆ ಎಂದು ಮಗುವಿನ ತಾಯಿ ರೇಖಾ ಆರೋಪಿಸಿದ್ದಾರೆ.
ಮನೆಯಲ್ಲಿ ಹೆಜ್ಜೆ ಸಪ್ಪಳ ಕೇಳಿ ಎಚ್ಚರಗೊಂಡೆ, ಒಳಗೆ ಬಂದವನೇ ಮಗುವನ್ನು ಎತ್ತಿಕೊಂಡ. ಆ ವೇಳೆ ನಾನು ಪ್ರತಿಭಟಿಸಿದೆ, ಆದರೆ ಆತ ಮಗುವನ್ನು ಕಿಡ್ನಾಪ್ ಮಾಡಿಕೊಂಡು ಹೋಗಿಬಿಟ್ಟ.  ಬಹು ದೂರದವರೆಗೆ ಆತನನ್ನು ನನ್ನ ಐದು ವರ್ಷಗ ಮಗನ ಜೊತೆ ಹಿಂಬಾಲಿಸಿದೆ, ಆದರೆ ಆತ ಕುಬ್ಜಾ ನದಿಯ ನದಿಗೆ ಜಿಗಿದ, ನಾನು ಕೂಡ ನದಿಗೆ ಹಾರಿದೆ. ಆದರೆ ನೀರಿನ ಹರಿವಿನ ಪ್ರಮಾಣ ಹೆಚ್ಚು ಇದ್ದ ಕಾರಣ  ಆತನನ್ನು ಹಿಡಿಯಲಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. 
ಬಂದ ಆಗಂತುಕ ಏಕೆ ತಮ್ಮ 1 ವರ್ಷದ ಮಗುವನ್ನು ಟಾರ್ಗೆಟ್ ಮಾಡಿದ್ದಾನೆ ಎಂಬುದು ಪೋಷಕರಿಗೆ ಇನ್ನೂ ನಿಗೂಡವಾಗಿದೆ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT