ಸಂಗ್ರಹ ಚಿತ್ರ 
ರಾಜ್ಯ

ಐಎಂಎ ವಂಚನೆ ಪ್ರಕರಣ: ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಹಣ ಪಡೆದಿದ್ದ ಮೌಲ್ವಿ ಬಂಧನ!

ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಇದೀಗ ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಮನ್ಸೂರ್ ಅಲಿಖಾನ್ ರಿಂದ ಹಣ ಪಡೆದಿದ್ದ ಆರೋಪದ ಮೇರೆಗೆ ಮುಸ್ಲಿಮ್ ಧರ್ಮ ಗುರುವೊಬ್ಬರನ್ನು ಬಂಧಿಸಿದ್ದಾರೆ.

ಬೆಂಗಳೂರು: ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಇದೀಗ ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಮನ್ಸೂರ್ ಅಲಿಖಾನ್ ರಿಂದ ಹಣ ಪಡೆದಿದ್ದ ಆರೋಪದ ಮೇರೆಗೆ ಮುಸ್ಲಿಮ್ ಧರ್ಮ ಗುರುವೊಬ್ಬರನ್ನು ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ಶಿವಾಜಿನಗರದ ಓಪಿಎಚ್‌ ರಸ್ತೆಯಲ್ಲಿ ಬೇಪಾರಿಯನ್‌ ಮಸೀದಿ ಧರ್ಮಗುರು ಹನೀಫ್‌ ಅಫ್ಸರ್‌ ಅಜೀಜ್‌ ರನ್ನು ಅಧಿಕಾರಿಗಳು ಬಂಧಿಸಿದ್ದು, ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಈತ ಬರೊಬ್ಬರಿ 3 ಕೋಟಿ ಮೌಲ್ಯದ ಮನೆ ಉಡುಗೊರೆ ಪಡೆದಿದ್ದ ಎನ್ನಲಾಗಿದೆ. ಅಂತೆಯೇ ಐಎಂಎ ಸಂಸ್ಥೆ ನಿರ್ದೇಶಕರ ವಿಚಾರಣೆ ವೇಳೆ ಧರ್ಮಗುರುವಿಗೆ 2017ರಲ್ಲಿ ಎಚ್ಎಸ್ಆರ್‌ ಲೇಔಟ್ ನಲ್ಲಿ ಮೂರು ಕೋಟಿ ಮೌಲ್ಯದ ಐಶಾರಾಮಿ ಮನೆಯನ್ನು ಉಡುಗೊರೆಯಾಗಿ ನೀಡಿದ್ದ ವಿಚಾರ ಕೂಡ ಇದೀಗ ಬಯಲಾಗಿದೆ. 
ವಿಚಾರಣೆ ವೇಳೆ ಈ ಮಾಹಿತಿಯನ್ನು ಸಂಗ್ರಹಿಸಿದ ಅಧಿಕಾರಿಗಳು ಮೌಲ್ವಿ ಅವರನ್ನು ನಿನ್ನೆ ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ. ಬಳಿಕ ಸಂಜೆ ವೇಳೆಗೆ ಬಂಧನ ಪ್ರಕ್ರಿಯೆಯನ್ನು ಅಧಿಕೃತಗೊಳಿಸಿದ್ದಾರೆ.
ಈ ಧರ್ಮ ಗುರು ಮಾತು ಕೇಳಿ ಸಾವಿರಾರು ಮಂದಿ ಅಮಾಯಕರು ಐಎಂಎನಲ್ಲಿ ಹೂಡಿಕೆ ಮಾಡಿದ್ದರು. ಜನ ಸಮಾನ್ಯರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಐಎಂಎ ಸಂಸ್ಥೆಯಲ್ಲಿ ಸಹಕರಿಸಿದ ಆರೋಪದ ಮೇರೆಗೆ ಹನೀಫ್‌ ಅವರನ್ನು ಬಂಧಿಸಲಾಗಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಡಿಸಿಪಿ ಎಸ್‌.ಗಿರೀಶ್‌ ತಿಳಿಸಿದ್ದಾರೆ.
ಈ ಹಿಂದೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ಕೂಡ ಈ ಹಿಂದೆ ಬಿಡುಗಡೆಗೊಳಿಸಿದ್ದ ಆಡಿಯೋ ಮತ್ತು ವಿಡಿಯೋ ಹೇಳಿಕೆಗಳಲ್ಲಿ ತನ್ನಿಂದ ಧಾರ್ಮಿಕ ಗುರುಗಳು ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದ. ಈ ಸಂಬಂಧವೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT