ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮದ್ಯಪಾನ ಮಾಡಿದ್ದ ಏರ್ ಇಂಡಿಯಾ ಪೈಲಟ್ ಅಮಾನತು

ವಿಮಾನ ಚಾಲನೆ ಮಾಡದಿದ್ದರೂ ಮದ್ಯಪಾನ ಮಾಡಿ ಕಾಕ್ ಪಿಟ್ ನಲ್ಲಿ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್ ನನ್ನು ಮೂರು ತಿಂಗಳ...

ಬೆಂಗಳೂರು: ವಿಮಾನ ಚಾಲನೆ ಮಾಡದಿದ್ದರೂ ಮದ್ಯಪಾನ ಮಾಡಿ ಕಾಕ್ ಪಿಟ್ ನಲ್ಲಿ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್ ನನ್ನು ಮೂರು ತಿಂಗಳ ಕಾಲ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಜುಲೈ 13ರಂದು ರಜೆಯಲ್ಲಿದ್ದ ಪೈಲಟ್ ಜಿತೇಂದ್ರ ಸಿಂಗ್ ಅವರು ಕಾಕ್ ಪಿಟ್ ನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವರನ್ನು ಆಲ್ಕೋಹಾಲ್ ಪರೀಕ್ಷೆಗೆ ಒಳಪಡಿಸಾಗಿದ್ದು, ಪರೀಕ್ಷೆಯಲ್ಲಿ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ.
ವಿಮಾನದಲ್ಲಿ ಒಂದೇ ಒಂದು ಆಸನ ಕೂಡ ಖಾಲಿ ಇಲ್ಲದ ಕಾರಣ ಪೈಲಟ್ ಜಿತೇಂದ್ರ ಸಿಂಗ್ ಅವರಿಗೆ ಸಹಾಯಕ ಪೈಲಟ್ ಆಗಿ ಕಾಕ್ ಪಿಟ್ ನಲ್ಲಿ ಪ್ರಯಾಣಿಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ)ದ ನಿಯಮಗಳಡಿ ಅನುಮತಿ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಕಾಕ್ ಪಿಟ್ ಪ್ರವೇಶಿಸುವ ಪ್ರತಿಯೊಬ್ಬರು ಪ್ರಯಾಣಕ್ಕು ಮುನ್ನ ಮತ್ತು ನಂತರ ಆಲ್ಕೋಹಾಲ್ ಪರೀಕ್ಷೆಗೆ ಒಳಪಡುವುದು ಕಡ್ಡಾಯವಾಗಿದೆ ಮತ್ತು ಮದ್ಯಪಾನ ಮಾಡಿ ಕಾಕ್ ಪಿಟ್ ನಲ್ಲಿ ಪ್ರಯಾಣಿಸುವಂತಿಲ್ಲ ಎಂಬ ನಿಯಮವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT