ಪಿಯೂಷ್ ಗೋಯಲ್ 
ರಾಜ್ಯ

ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳ ತ್ವರಿತ ಕ್ರಮಕ್ಕೆ ಪಿಯೂಷ್ ಗೋಯಲ್ ಒತ್ತಾಯ

ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳನ್ನು ತ್ವರಿತವಾಗಿಸಲು ಕೇಂದ್ರ ರೈಲ್ವೆ ಖಾತೆ ಸಚಿವ ಪಿಯೂಷ್ ...

ಬೆಂಗಳೂರು; ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳನ್ನು ತ್ವರಿತವಾಗಿಸಲು ಕೇಂದ್ರ ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ಸೂಕ್ತ ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿನ ವಿವಿಧ ರೈಲ್ವೆ ಯೋಜನೆಗಳ ಕಾರ್ಯ ವಿಳಂಬಕ್ಕೆ ಭೂ ಒತ್ತುವರಿ ಸಮಸ್ಯೆ ಮತ್ತು ಅರಣ್ಯ, ಪರಿಸರ ಇಲಾಖೆಯಿಂದ ಅನುಮತಿ ಪಡೆಯಲು ವಿಳಂಬವಾಗಿರುವುದು ಕಾರಣ ಎಂದು ವಿಶ್ಲೇಷಿಸಲಾಗಿದೆ.
ಹೊಸ ರೈಲ್ವೆ ಮಾರ್ಗ, ಗೇಜ್ ಪರಿವರ್ತನೆ ಮತ್ತು ದ್ವಿಗುಣಗೊಳಿಸುವ ಕೆಲಸ ಮೂಲಭೂತ ಸೌಕರ್ಯ ಯೋಜನೆಗಳಲ್ಲಿ ಮುಖ್ಯವಾಗಿದ್ದು ವಿದ್ಯುದ್ದೀಕರಣಕ್ಕೆ ಪ್ರಸರಣ ಮಾರ್ಗದ ಕಾರ್ಯನಿರ್ವಹಣೆ ಕೂಡ ಸೇರಿಕೊಂಡಿದೆ.
ಹಲವು ಕಾರಣಗಳಿಂದ ರಾಜ್ಯದಲ್ಲಿನ 17 ವಿವಿಧ ರೈಲ್ವೆ ಯೋಜನೆಗಳ ಕಾಮಗಾರಿ ವಿಳಂಬವಾಗಿದೆ, ಕರ್ನಾಟಕ ಸರ್ಕಾರದ ಜೊತೆ ಸೇರಿಕೊಂಡು ಈ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗಿದ್ದು ರಾಜ್ಯ ಸರ್ಕಾರ 2018-19ನೇ ಸಾಲಿಗೆ 510.9 ಕೋಟಿ ರೂಪಾಯಿ ಮತ್ತು 2019-20ನೇ ಸಾಲಿಗೆ ಇನ್ನಷ್ಟು ಹಣವನ್ನು ಮೀಸಲಿಡಬೇಕಿದೆ. 
ಈ ವಿಷಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ನೈರುತ್ಯ ರೈಲ್ವೆ ಇಲಾಖೆಯ ಪ್ರಧಾನ ವ್ಯವಸ್ಥಾಪಕ ಅಜಯ್ ಕುಮಾರ್ ಸಿಂಗ್ ಕಳೆದ 9ರಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್ ಅವರಿಗೆ ಪತ್ರ ಬರೆದು ರಾಜ್ಯದ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿ ಇಂದಿನ ಸ್ಥಿತಿಗತಿ ಮತ್ತು ಇಲಾಖೆಗಳಿಂದ ಶೀಘ್ರ ಅನುಮತಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆಯಾಗಿ ಈ ತಿಂಗಳ ಅಂತ್ಯದೊಳಗೆ ರೈಲ್ವೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಗಳ ಕುರಿತು ಚರ್ಚಿಸಲು ಸಮಯ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!