ಅತೃಪ್ತ ಶಾಸಕರ ಪರ ವಕೀಲ 
ರಾಜ್ಯ

ಅಧಿವೇಶನದಲ್ಲಿ ಪಾಲ್ಗೊಳ್ಳುವ ಅಥವಾ ಗೈರಾಗುವ ಸಂಪೂರ್ಣ ಹಕ್ಕು ಶಾಸಕರಿಗಿದೆ: ಮುಕುಲ್ ರೋಹ್ಟಗಿ

ನಾಳಿನ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳುವ ಅಥವಾ ಗೈರಾಗುವ ಸಂಪೂರ್ಣ ಹಕ್ಕು ಶಾಸಕರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಅತೃಪ್ತರ ಪರ ವಕೀಲ ಮುಕುಲ್ ರೋಹ್ಟಗಿ ಹೇಳಿದ್ದಾರೆ.

ನವದೆಹಲಿ: ನಾಳಿನ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳುವ ಅಥವಾ ಗೈರಾಗುವ ಸಂಪೂರ್ಣ ಹಕ್ಕು ಶಾಸಕರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಅತೃಪ್ತರ ಪರ ವಕೀಲ ಮುಕುಲ್ ರೋಹ್ಟಗಿ ಹೇಳಿದ್ದಾರೆ.
ಇಂದು ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ನ್ಯಾಯಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಅವರು, 'ಇಂದಿನ ತೀರ್ಪು ಅತೃಪ್ತ ಶಾಸಕರಿಗೆ ನಿರಾಳತೆ ನೀಡಿದೆ. ವಿಶ್ವಾಸಮತ ಹಿನ್ನಲೆಯಲ್ಲಿ ನಡೆಯುವ ವಿಧಾನಸಭೆ ಕಲಾಪಕ್ಕೆ ಹಾಜರಾಗಲೇ ಬೇಕು ಎಂಬ ನಿಯನ ಈ ಅತೃಪ್ತಶಾಸಕರಿಗೆ ಅನ್ವಯವಾಗುವುದಿಲ್ಲ. ಕಲಾಪಕ್ಕೆ ಹಾಜರಾಗುವ ಅಥವಾ ಗೈರಾಗುವ ಸಂಪೂರ್ಣ ಹಕ್ಕು ಶಾಸಕರಿಗೆ ಇದೆ ಎಂದು  ಹೇಳಿದೆ ಎಂದು ಹೇಳಿದ್ದಾರೆ.
ಅಂತೆಯೇ ಶಾಸಕರಿಗೆ ನೀಡಲಾಗಿರುವ ವಿಪ್ ಕುರಿತು ಮಾತನಾಡಿರುವ ರೋಹ್ಟಗಿ ಅವರು, ಸುಪ್ರೀಂ ಕೋರ್ಟ್ ನ ದೃಷ್ಟಿಯಲ್ಲಿ ನೋಡುವುದಾದರೆ ದೋಸ್ತಿ ಪಕ್ಷಗಳು ಜಾರಿ ಮಾಡಿರುವ ವಿಪ್ ಅತೃಪ್ತ ಶಾಸಕರಿಗೆ ಅನ್ವಯಿಸುವುದಿಲ್ಲ. ಅಂತೆಯೇ ಶಾಸಕರ ರಾಜಿನಾಮೆ ವಿಚಾರದ ಸಂಪೂರ್ಣ ಜವಾಬ್ದಾರಿ ಸ್ಪೀಕರ್ ಮೇಲಿದ್ದು, ಅವರ ನಿರ್ಣಯವೇ ಅಂತಿಮ. ರಾಜಿನಾಮೆ ಕುರಿತ ಯಾವುದೇ ನಿರ್ಧಾರಕ್ಕೆ ಅವರು ಬದ್ಧರು ಎಂದು ರೋಹ್ಟಗಿ ಹೇಳಿದ್ದಾರೆ.
ರಾಜೀನಾಮೆ ಸ್ವೀಕರಿಸುವಲ್ಲಿ ಸ್ಪೀಕರ್ ರಮೇಶ್ ಕುಮಾರ್​ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ 15 ಅತೃಪ್ತ ಶಾಸಕರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಕಳೆದ ವಾರ ಆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್​ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿತ್ತು. ಇಂದು ಮತ್ತೊಮ್ಮೆ ಸಿಜೆಐ ರಂಜನ್​ ಗೊಗೋಯ್​ ಪೀಠದಲ್ಲಿ ಮಹತ್ವದ ವಿಚಾರಣೆ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT