ಧ್ವಂಸಗೊಂಡಿರುವ ಶೆಡ್ ಗಳು 
ರಾಜ್ಯ

ಬೆಂಗಳೂರು: ಶೆಡ್ ಗಳನ್ನು ಧ್ವಂಸಗೊಳಿಸಿ ರೌಡಿಗಳ ಪುಂಡಾಟ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಹೆಣ್ಣೂರಿನಲ್ಲಿ ರೌಡಿಗಳು ಪುಂಡಾಟ ಮೆರೆದಿದ್ದು, ಮೂರು ಕುಟುಂಬಗಳು ವಾಸಿಸುತ್ತಿದ್ದ ಸಣ್ಣ ಶೆಡ್ ಗಳನ್ನು ಧ್ವಂಸಗೊಳಿಸಿದ್ದಾರೆ.

ಬೆಂಗಳೂರು: ಭೂ ವಿವಾದಕ್ಕೆ ಸಂಬಂಧಿಸಿದಂತೆ  ಹೆಣ್ಣೂರಿನಲ್ಲಿ ರೌಡಿಗಳು ಪುಂಡಾಟ ಮೆರೆದಿದ್ದು, ಮೂರು ಕುಟುಂಬಗಳು ವಾಸಿಸುತ್ತಿದ್ದ ಸಣ್ಣ  ಶೆಡ್ ಗಳನ್ನು ಧ್ವಂಸಗೊಳಿಸಿದ್ದಾರೆ.
ಭೂಮಿಗೆ ಸಂಬಂಧಿಸಿದ ನೋಂದಣಿ ಪತ್ರ, ಮತ್ತಿತರ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಕೂಡಾ ಸ್ಥಳೀಯ ರೌಡಿ ರಘು ನೇತೃತ್ವದಲ್ಲಿ ನುಗ್ಗಿದ್ದ ಸುಮಾರು 50ಕ್ಕೂ ಹೆಚ್ಚು ರೌಡಿಗಳು ಮನಬಂದಂತೆ ಹಲ್ಲೆ ನಡೆಸಿ, ಶೆಡ್ ಗಳಲ್ಲಿ ವಾಸಿಸುತ್ತಿದ್ದವರನ್ನು ಅಲ್ಲಿಂದ  ಓಡಿಸಿರುವ ಘಟನೆ ನಡೆದಿದೆ.
ಹೆನ್ನೂರಿನ ವಡ್ಡರಪಾಳ್ಯದ ಶಿರಡಿ ಸಾಯಿಬಾಬಾ ದೇವಸ್ಥಾನದ ಬಳಿ ಇರುವ 1 ಎಕರೆ , ಮೂರು ಗಂಟೆ ಆಸ್ತಿ ತನ್ನಗೆ ಬರಬೇಕೆಂದು ರಘು ವಾದಿಸುತ್ತಾನೆ. ವಿವಾದಿತ ಭೂಮಿ ಬಳಿ ಇರುವ ನಿವೇಶನಗಳು ಕೂಡಾ ತನ್ನದೇ ಎಂದು ರಘು ಹೇಳುತ್ತಿದ್ದಾನೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಬುಧವಾರ ಬೆಳಗ್ಗೆ 1-30 ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.  ಶೆಡ್ ಗಳಿಗೆ ನುಗ್ಗಿರುವ ರೌಡಿಪಡೆ ತಮ್ಮ ಮೇಲೆ ಹಲ್ಲೆ ನಡೆಸಿರುವುದಲ್ಲದೇ, ಮೂರು ಜೆಸಿಬಿಗಳ ಮೂಲಕ ಶೆಡ್ ಗಳನ್ನು  ಧ್ವಂಸಗೊಳಿಸಿದೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. ಕೆಲವರು ಚೈನ್ ಗಳನ್ನು ದೋಚಿದ್ದಾರೆ ಎಂದು ಖೈರುನಿಸ್ಸಾ ಆರೋಪಿಸಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ರೌಡಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಆದರೆ, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಡ್ರೈವರ್ ಗಳನ್ನು ಬಂಧಿಸಿದ್ದಾರೆ ಎಂದು ಹೆಣ್ಣೂರು ನಿವಾಸಿ ಸತೀಶ್ ಪಿಲೈ ಹೇಳಿದ್ದಾರೆ.
ನೀರಿನ ತೊಂದರೆಯಿಂದಾಗಿ ಆ ಪ್ರದೇಶದಲ್ಲಿ ಯಾವುದೇ ಮನೆಗಳನ್ನು ನಿರ್ಮಿಸುತ್ತಿಲ್ಲ, ಎಲ್ಲಾ ಅಗತ್ಯದಾಖಲೆಗಳೊಂದಿಗೆ ಭೂಮಿಯನ್ನು ನೀಡಲಾಗಿದೆ. ಆದರೆ, ರಘು ನೇತೃತ್ವದಲ್ಲಿನ ರೌಡಿಗಳು ಆಗಾಗ್ಗೆ ಬಂದು ತೊಂದರೆ ನೀಡುತ್ತಿದ್ದಾರೆ ಎಂದು ಭೂ ಮಾಲೀಕರಲ್ಲಿ ಒಬ್ಬರಾದ ಯಸ್ಮಿನ್ ಅಬ್ದುಲ್ ಅಹ್ಮದ್ ಹೇಳಿದ್ದಾರೆ.
ಈ ಪ್ರಕರಣ ಸಂಬಂಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಹೆಣ್ಣೂರು ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ರಘು ಮತ್ತಿತರ ವಿರುದ್ಧ ವಿವಿಧ  ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT