ರಾಜ್ಯ

ಬಂಟ್ವಾಳ: ಕಾರು-ಟ್ಯಾಂಕರ್ ನಡುವೆ ಭೀಕರ ಅಪಘಾತ; ಐವರ ದುರ್ಮರಣ

Shilpa D
ಬಂಟ್ವಾಳ: ಕಾರು ಮತ್ತು ಟ್ಯಾಂಕರ್‌ ನಡುವಿನ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಐವರು  ಮೃತಪಟ್ಟ ಭೀಕರ ಘಟನೆ ಬ್ರಹ್ಮರ ಕೂಟ್ಲು ಟೋಲ್‌ ಗೇಟ್‌ ಸಮೀಪ ಶುಕ್ರವಾರ ನಡೆದಿದೆ.
ಬಂಟ್ವಾಳ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75 ರ ಬ್ರಹ್ಮರಕೋಟ್ಲು ಟೋಲ್ ಗೇಟ್ ಬಳಿ ಅಪಘಾತ ಸಂಭವಿಸಿದೆ.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿಯಾಗಿದೆ. 
ಕಾರಿನಲ್ಲಿ ಭಟ್ಕಳ ಮೂಲದ ಕುಟುಂಬ ಪ್ರಯಾಣಿಸುತ್ತಿತ್ತು. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತ ಪಟ್ಟರೇ ಮತ್ತೋರ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 11 ಜನ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
SCROLL FOR NEXT