ಮೈಸೂರು: ಲಾರಿ-ಬೈಕ್ ನಡುವೆ ಡಿಕ್ಕಿ ಸ್ನೇಹಿತರ ಮನೆಗೆ ಊಟಕ್ಕೆ ತೆರಳಿದ್ದ ನಾಲ್ವರು ದುರ್ಮರಣ 
ರಾಜ್ಯ

ಮೈಸೂರು: ಲಾರಿ-ಬೈಕ್ ನಡುವೆ ಡಿಕ್ಕಿ ಸ್ನೇಹಿತರ ಮನೆಗೆ ಊಟಕ್ಕೆ ತೆರಳಿದ್ದ ನಾಲ್ವರು ದುರ್ಮರಣ

ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದ ಬಳಿ ನಡೆದಿದೆ.

ಮೈಸೂರು: ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ  ತಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಎಚ್.ಡಿ.ಕೋಟೆ ತಾಲೂಕಿನ ಕಂದೇಗಾಲ ನಿವಾಸಿ ರಾಘವೇಂದ್ರ (25), ಕಂಚಮಳ್ಳಿ ನಿವಾಸಿ ಮಧುಕುಮಾರ್ (19), ನಂಜನಗೂಡು ತಾಲೂಕಿನ ಹುರಾ ಗ್ರಾಮದ ಮಧು ಮತ್ತು ಒಡಿಸ್ಸಾ ಮೂಲದ ಅಹಮ್ಮದ್ ಖಾನ್ ಎನ್ನುವವರು ಸಾವನ್ನಪ್ಪಿದ್ದಾರೆ.
ಇವರೆಲ್ಲರೂ ಸ್ನೇಹಿತನ ಮನೆಗೆ ಊಟಕ್ಕೆಂದು ಹೋಗಿದ್ದರು. ಊಟ ಮುಗಿಸಿಕೊಂಡು ಹಿಂದಿರುಗುವ ವೇಳೆ ನಡುರಾತ್ರಿಯಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಡಿಕ್ಕಿಯಾಗಿದೆ.
ಮೃತರೆಲ್ಲರೂ ಮೈಸೂರಿನ ಹೋಟೆಲ್ ಒಂದರಲ್ಲಿ ಉದ್ಯೋಗದಲ್ಲಿದ್ದರೆಂದು ಮಾಹಿತಿ ಇದೆ.
ಮೃತದೇಹಗಳನ್ನು  ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT