ಸಂಗ್ರಹ ಚಿತ್ರ 
ರಾಜ್ಯ

ಮನ್ಸೂರ್ ಖಾನ್ ಇ.ಡಿ. ಕಸ್ಟಡಿ ಅವಧಿ ಮತ್ತೆ ಮೂರು ದಿನ ವಿಸ್ತರಣೆ

ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ನನ್ನು ಕೋರ್ಟ್ ಮತ್ತೆ ಮೂರು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.

ಬೆಂಗಳೂರು: ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ನನ್ನು ಕೋರ್ಟ್ ಮತ್ತೆ ಮೂರು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.
ಐಎಂಎ (ಐ ಮಾನಿಟರಿ ಅಡ್ವೈಸರಿ) ಸಮೂಹ ಕಂಪನಿ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಮನ್ಸೂರ್ ಖಾನ್ ಅವರನ್ನು ಇದೇ 26ರವರೆಗೆ ಜಾರಿ ನಿರ್ದೇಶನಾಲಯದ(ಇ.ಡಿ) ತನಿಖಾಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಈಗಾಗಲೇ ಮೂರು ದಿನಗಳಿಂದ ಇ.ಡಿ ಕಸ್ಟಡಿಯಲ್ಲಿದ್ದ ಮನ್ಸೂರ್ ಖಾನ್ ಅವರನ್ನು ಇ.ಡಿ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ ನಗರದ ಸೆಷನ್ಸ್ ಕೋರ್ಟ್ ಪ್ರಧಾನ ನ್ಯಾಯಾಧೀಶ ಶಿವಶಂಕರ ಬಿ.ಅಮರಣ್ಣವರ ಮುಂದೆ ಹಾಜರುಪಡಿಸಿದರು.
ಇ.ಡಿ ಪರ ವಕೀಲರು, ಆರೋಪಿಯ ಅನಾರೋಗ್ಯ ಕಾರಣದಿಂದ ಸಮಗ್ರ ತನಿಖೆ ಕೈಗೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ ಈ ತಿಂಗಳ 30ರವರೆಗೆ ಕಸ್ಟಡಿ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.
ಗಣ್ಯರ ಹೆಸರು ಹೇಳಿದ ಕಿಂಗ್ ಪಿನ್
ಇನ್ನು ಪ್ರಸ್ತುತ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಶದಲ್ಲಿರುವ ಮನ್ಸೂರ್ ಖಾನ್, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧ ಇರುವ ಕೆಲ ರಾಜಕಾರಣಗಳು ಮತ್ತು ಕೆಲ ಸ್ಥಳೀಯ ಮುಸ್ಲಿಂ ಉದ್ಯಮಿಗಳು ಮತ್ತು ಮುಸ್ಲಿಂ ಧಾರ್ಮಿಕ ಮುಖಂಡರ ಹೆಸರು ಹೇಳಿದ್ದಾನೆ ಎಂದು ಹೇಳಲಾಗಿದೆ.  ಆತ ನೀಡಿರುವ ಮಾಹಿತಿ ಮೇರೆಗೆ ಅಧಿಕಾರಿಗಳು ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT